ಮೈಸೂರು: ಎಚ್ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿ, ಜಲಾಶಯ ಭರ್ತಿಯಾಗುತ್ತಿದೆ.
ಕಬಿನಿ ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮುಖಾಂತರ ಜನ ಜಾನುವಾರುಗಳಿಗೆ ಕುಡಿಯಲು ಅನುಕೂಲವಾಗುವಂತೆ ಕೆರೆ ಕಟ್ಟೆಗಳಿಗೆ ಜುಲೈ 10 ರಿಂದ 25 ರವರೆಗೆ ನೀರು ಹರಿಸಲು ಉದ್ದೇಶಿಸಲಾಗಿದೆ.
ಕಬಿನಿ ಜಲಾಶಯದ ವ್ಯಾಪ್ತಿಗೆ ಬರುವ ಅಚ್ಚುಕಟ್ಟುದಾರರು ನೀರಾವರಿ ಅಧಿಕಾರಿಗಳೊಡನೆ ಸಹಕರಿಸಿ ಕೆರೆ ಕಟ್ಟೆಗಳಿಗೆ ಕುಡಿಯುವ ಮತ್ತು ಜನ ಜಾನುವಾರುಗಳ ಉಪಯೋಗಕ್ಕಾಗಿ ಮಾತ್ರ ನೀರನ್ನು ಬಳಸಬೇಕು. ಮುಂದಿನ ದಿನಗಳಲ್ಲಿ ಜಲಾಶಯಕ್ಕೆ ಬರುವ ಒಳಹರಿವಿನ ಪ್ರಮಾಣವನ್ನು ಆಧರಿಸಿ ಅಚ್ಚುಕಟ್ಟು ಪ್ರದೇಶಕ್ಕೆ 2024-25 ನೇ ಸಾಲಿನ ಖಾರೀಪ್ ಬೆಳೆಗಳಿಗೆ ನಾಲೆಗಳ ಮುಖೇನ ನೀರು ಬಿಡುವ ಬಗ್ಗೆ ಕಬಿನಿ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ ಕರೆದು ಸಮಿತಿಯಲ್ಲಿ ತೀರ್ಮಾನಿಸಲಾಗುವುದು ಎಂದು ಕಬಿನಿ ನೀರಾವರಿ ಸಲಹಾ ಸಮಿತಿಯ ಕಬಿನಿ ಮತ್ತು ವರಣಾ ನಾಲಾ ವೃತ್ತ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಇಂಜಿನಿಯರ್ ಮಹೇಶ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…