ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಟನ್ ಗಟ್ಟಲೇ ದಾಖಲೆಗಳಿದ್ದರೆ ಬಹಿರಂಗ ಪಡಿಸಲಿ ನಮ್ಮದೇನು ಅಭಿಯಂತ್ರವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಮಂಡ್ಯದಲ್ಲಿ ಇಂದು(ಏಪ್ರಿಲ್.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಪ್ರಕಾರ ತಾವು ಒಬ್ಬರೇ ಸರಿ ಇರೋದು ಎಂಬಂತೆ ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಒಂದು ವೇಳೆ ರಾಜ್ಯ ಸರ್ಕಾರದ ಅಕ್ರಮದ ವಿರುದ್ಧ ದಾಖಲೆಗಳಿದ್ದರೆ ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಇನ್ನೂ ಸಚಿವ ಕೆ.ಎನ್.ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣವನ್ನು ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆಯೇ ಅವರು ಹನಿಟ್ರ್ಯಾಪ್ ಬಗ್ಗೆ ಯಾಕೆ ಮಾತನಾಡುತ್ತಿದ್ದಾರೆ ಎಂಉದು ತಿಳಿದಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಆನ್ಲೈನ್ ಬೆಟ್ಟಿಂಗ್ ತಡೆ ಬಗ್ಗೆ ಸಭೆ ನಡೆಸಿ ಮಾತನಾಡಿದ ಅವರು, ಬೆಟ್ಟಿಂಗ್ ನಡೆಸುವವರನ್ನೂ ನಾವು ಕರೆದು ಸಭೆ ನಡೆಸಿದ್ದು, ಕಾನೂನು ವ್ಯಾಪ್ತಿಯಲ್ಲಿ ಇರುವಂತೆ ಹೇಳಿದ್ದೇವೆ. ಅದಕ್ಕೆ ಅವರು ಕೂಡ ಒಪ್ಪಿದ್ದಾರೆ. ಅಲ್ಲದೇ ಮುಂದಿನ ಒಂದು ತಿಂಗಳೊಳಗಾಗಿ ನಾವು ಹೊಸ ಕಾನೂನು ತರುತ್ತೇವೆ ಎಂದು ಹೇಳಿದರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…