ಮಂಡ್ಯ: ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಎಂದೇ ಹೆಸರುವಾಸಿಯಾಗಿದ್ದ ಮಂಡ್ಯದ ಚನ್ನೇಗೌಡ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಗಡ್ಡಪ್ಪ ಅವರಿಗೆ ತಿಂಗಳ ಹಿಂದೆ ಕೆಳಗೆ ಬಿದ್ದ ಸೊಂಟ ಪೆಟ್ಟಾಗಿ ಆಪರೇಷನ್ ಆಗಿತ್ತು.
ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಂಜೆ ಸ್ವಗ್ರಾಮ ನೊದೆಕೊಪ್ಪಲು ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಗಡ್ಡಪ್ಪ ಎಂದೇ ಖ್ಯಾತಿ ಪಡೆದಿದ್ದ ಮಂಡ್ಯ ತಾಲ್ಲೂಕಿನ ನೊದೆಕೊಪ್ಪಲು ಗ್ರಾಮದ ಚನ್ನೇಗೌಡ ಅವರು, ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿದಂತೆ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಮೇಕಪ್ ಇಲ್ಲದೇ ಸಾಮಾನ್ಯವಾಗಿ ನಟಿಸಿದ್ದ ಅವರ ನಟನೆ ಜನರಿಗೆ ಬಹಳ ಇಷ್ಟವಾಗಿತ್ತು. ಈ ಸಿನಿಮಾಗೆ ಅಂತರಾಷ್ಟ್ರೀಯ ಪ್ರಶಸ್ತಿ ಕೂಡ ಬಂದಿತ್ತು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…