ಮಂಡ್ಯ

ಧುಮ್ಮಿಕ್ಕುತ್ತಿದೆ ಗಗನಚುಕ್ಕಿ ಜಲಪಾತ

ಮಂಡ್ಯ : ಕಾವೇರಿ ಕೊಳ್ಳದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶಿವನಸಮುದ್ರದಲ್ಲಿನ ಅವಳಿ ಜಲಪಾತಗಳಲ್ಲಿ ಒಂದಾದ ಗಗನ ಚುಕ್ಕಿಯು ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ಈ ರೌದ್ರ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.

ಹೌದು.. ದಶಕಗಳ ಬಳಿಕ ಅವಧಿಗೂ ಮೊದಲೆ ಮುಂಗಾರು ರಾಜ್ಯಕ್ಕೆ ಕಾಲಿಟ್ಟಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ರೆ, ಶಿವನ ಸಮುದ್ರದ ಗಗನಚುಕ್ಕಿ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿದು ಪ್ರವಾಸಿಗರನ್ನು ಮೈಬೀಸಿ ಕರೆಯುತ್ತಿದೆ.

ಇನ್ನು ಕೊಡಗಿನ ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿಯು ಉಪ ನದಿಗಳೊಂದಿಗೆ ಸಂಗಮಗೊಂಡು ಕೆಆರ್‌ಎಸ್‌ ಜಲಾಶಯ ಸೇರುತ್ತದೆ. ಅಣೆಕಟ್ಟೆಯಿಂದ ಹೊರಬರುವ ಕಾವೇರಿ ನದಿಯೊಂದಿಗೆ ಟಿ.ನರಸೀಪುರ ಬಳಿ ಕಬಿನಿ ಮೊದಲಾದ ಉಪನದಿಗಳು ಸಂಗಮವಾಗುತ್ತವೆ. ಬೆಟ್ಟಗುಡ್ಡ, ಕಾಡುಮೇಡುಗಳ ಮೂಲಕ ಶಿವನಸಮುದ್ರ ತಲುಪುತ್ತಿದ್ದಂತೆಯೇ 419 ಅಡಿ ಎತ್ತರದಿಂದ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳಾಗಿ ಧುಮ್ಮಿಕ್ಕುತ್ತದೆ. ಈ ದೃಶ್ಯದ ವೈಭವ ನೋಡುಗರನ್ನು ರೋಮಾಂಚನಗೊಳಿಸುವ ಜತೆಗೆ ಮನಸ್ಸಿಗೆ ಮುದ ನೀಡುತ್ತದೆ.

ಸದ್ಯ ಪ್ರವಾಸಿಗರು ಕೂಡ ಈ ದೃಶ್ಯವನ್ನ ಕಣ್ತುಂಬಿಕೊಳ್ಳಲು ಈಗಾಗಲೇ ಗಗನಚುಕ್ಕಿ ಜಲಪಾತದ ಕಡೆ ಮುಖ ಮಾಡಿದ್ದಾರೆ. ಒಂದು ವೇಳೆ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾದಲ್ಲಿ, ಜಲಪಾತದ ಸೌಂದರ್ಯ ಮತ್ತಷ್ಟು ಹೆಚ್ಚಾಗಲಿದೆ.

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

11 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

11 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

12 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

12 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

13 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

13 hours ago