ಮಂಡ್ಯ : ಕಾವೇರಿ ಕೊಳ್ಳದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶಿವನಸಮುದ್ರದಲ್ಲಿನ ಅವಳಿ ಜಲಪಾತಗಳಲ್ಲಿ ಒಂದಾದ ಗಗನ ಚುಕ್ಕಿಯು ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ಈ ರೌದ್ರ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಹೌದು.. ದಶಕಗಳ ಬಳಿಕ ಅವಧಿಗೂ ಮೊದಲೆ ಮುಂಗಾರು ರಾಜ್ಯಕ್ಕೆ ಕಾಲಿಟ್ಟಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ರೆ, ಶಿವನ ಸಮುದ್ರದ ಗಗನಚುಕ್ಕಿ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿದು ಪ್ರವಾಸಿಗರನ್ನು ಮೈಬೀಸಿ ಕರೆಯುತ್ತಿದೆ.
ಇನ್ನು ಕೊಡಗಿನ ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿಯು ಉಪ ನದಿಗಳೊಂದಿಗೆ ಸಂಗಮಗೊಂಡು ಕೆಆರ್ಎಸ್ ಜಲಾಶಯ ಸೇರುತ್ತದೆ. ಅಣೆಕಟ್ಟೆಯಿಂದ ಹೊರಬರುವ ಕಾವೇರಿ ನದಿಯೊಂದಿಗೆ ಟಿ.ನರಸೀಪುರ ಬಳಿ ಕಬಿನಿ ಮೊದಲಾದ ಉಪನದಿಗಳು ಸಂಗಮವಾಗುತ್ತವೆ. ಬೆಟ್ಟಗುಡ್ಡ, ಕಾಡುಮೇಡುಗಳ ಮೂಲಕ ಶಿವನಸಮುದ್ರ ತಲುಪುತ್ತಿದ್ದಂತೆಯೇ 419 ಅಡಿ ಎತ್ತರದಿಂದ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳಾಗಿ ಧುಮ್ಮಿಕ್ಕುತ್ತದೆ. ಈ ದೃಶ್ಯದ ವೈಭವ ನೋಡುಗರನ್ನು ರೋಮಾಂಚನಗೊಳಿಸುವ ಜತೆಗೆ ಮನಸ್ಸಿಗೆ ಮುದ ನೀಡುತ್ತದೆ.
ಸದ್ಯ ಪ್ರವಾಸಿಗರು ಕೂಡ ಈ ದೃಶ್ಯವನ್ನ ಕಣ್ತುಂಬಿಕೊಳ್ಳಲು ಈಗಾಗಲೇ ಗಗನಚುಕ್ಕಿ ಜಲಪಾತದ ಕಡೆ ಮುಖ ಮಾಡಿದ್ದಾರೆ. ಒಂದು ವೇಳೆ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾದಲ್ಲಿ, ಜಲಪಾತದ ಸೌಂದರ್ಯ ಮತ್ತಷ್ಟು ಹೆಚ್ಚಾಗಲಿದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…