ಮಂಡ್ಯ

ಧುಮ್ಮಿಕ್ಕುತ್ತಿದೆ ಗಗನಚುಕ್ಕಿ ಜಲಪಾತ

ಮಂಡ್ಯ : ಕಾವೇರಿ ಕೊಳ್ಳದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶಿವನಸಮುದ್ರದಲ್ಲಿನ ಅವಳಿ ಜಲಪಾತಗಳಲ್ಲಿ ಒಂದಾದ ಗಗನ ಚುಕ್ಕಿಯು ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ಈ ರೌದ್ರ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.

ಹೌದು.. ದಶಕಗಳ ಬಳಿಕ ಅವಧಿಗೂ ಮೊದಲೆ ಮುಂಗಾರು ರಾಜ್ಯಕ್ಕೆ ಕಾಲಿಟ್ಟಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ರೆ, ಶಿವನ ಸಮುದ್ರದ ಗಗನಚುಕ್ಕಿ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿದು ಪ್ರವಾಸಿಗರನ್ನು ಮೈಬೀಸಿ ಕರೆಯುತ್ತಿದೆ.

ಇನ್ನು ಕೊಡಗಿನ ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿಯು ಉಪ ನದಿಗಳೊಂದಿಗೆ ಸಂಗಮಗೊಂಡು ಕೆಆರ್‌ಎಸ್‌ ಜಲಾಶಯ ಸೇರುತ್ತದೆ. ಅಣೆಕಟ್ಟೆಯಿಂದ ಹೊರಬರುವ ಕಾವೇರಿ ನದಿಯೊಂದಿಗೆ ಟಿ.ನರಸೀಪುರ ಬಳಿ ಕಬಿನಿ ಮೊದಲಾದ ಉಪನದಿಗಳು ಸಂಗಮವಾಗುತ್ತವೆ. ಬೆಟ್ಟಗುಡ್ಡ, ಕಾಡುಮೇಡುಗಳ ಮೂಲಕ ಶಿವನಸಮುದ್ರ ತಲುಪುತ್ತಿದ್ದಂತೆಯೇ 419 ಅಡಿ ಎತ್ತರದಿಂದ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳಾಗಿ ಧುಮ್ಮಿಕ್ಕುತ್ತದೆ. ಈ ದೃಶ್ಯದ ವೈಭವ ನೋಡುಗರನ್ನು ರೋಮಾಂಚನಗೊಳಿಸುವ ಜತೆಗೆ ಮನಸ್ಸಿಗೆ ಮುದ ನೀಡುತ್ತದೆ.

ಸದ್ಯ ಪ್ರವಾಸಿಗರು ಕೂಡ ಈ ದೃಶ್ಯವನ್ನ ಕಣ್ತುಂಬಿಕೊಳ್ಳಲು ಈಗಾಗಲೇ ಗಗನಚುಕ್ಕಿ ಜಲಪಾತದ ಕಡೆ ಮುಖ ಮಾಡಿದ್ದಾರೆ. ಒಂದು ವೇಳೆ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾದಲ್ಲಿ, ಜಲಪಾತದ ಸೌಂದರ್ಯ ಮತ್ತಷ್ಟು ಹೆಚ್ಚಾಗಲಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

6 hours ago