ಮಂಡ್ಯ: ಕಳೆದ ಒಂದೂವರೆ ವರ್ಷದಿಂದ ನೀರಿಲ್ಲದೇ ಭಣಗುಡುತ್ತಿದ್ದ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯ ಗಗನಚುಕ್ಕಿ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿದೆ. ಜಲಪಾತದ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ.
ಕಾವೇರಿ ಕೊಳ್ಳದ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯ ಭರ್ತಿಯಾಗಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಗಗನಚುಕ್ಕಿ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ. ಜಲಪಾತದ ಸೊಗಸನ್ನು ಕಣ್ತುಂಬಿಕೊಳ್ಳಲು ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ವಿವಿಧೆಡೆಗಳಿಂದ ಪ್ರವಾಸಿಗರ ದಂಡೇ ಜಲಪಾತದತ್ತ ಹರಿದು ಬರುತ್ತಿದೆ.
ಎತ್ತರದಿಂದ ಧುಮ್ಮಿಕ್ಕುವ ಗಗನಚುಕ್ಕಿ ಜಲಪಾತ ಹಾಗೂ ಕಲ್ಲುಬಂಡೆಗಳ ನಡುವೆ ಭೋರ್ಗರೆಯುವ ಕೊಳ್ಳೇಗಾಲದ ಭರಚುಕ್ಕಿ ಜಲಪಾತಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಈ ಎರಡೂ ಜಲಧಾರೆಗಳು ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಯ ಗಡಿಯಂಚಿನಲ್ಲೇ ಇವೆ.
ಕೊಡಗಿನ ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿಯು ಬೆಟ್ಟಗುಡ್ಡ, ಕಾಡುಮೇಡುಗಳ ಮೂಲಕ ಸಾಗಿ ಶಿವನಸಮುದ್ರ ತಲುಪುತ್ತಿದ್ದಂತೆಯೇ ಧುಮುಕಿ ಗಗನಚುಕ್ಕಿಯಾಗಿ, ಬಳಿಕ ಭರಚುಕ್ಕಿಯಾಗಿ ಹರಿಯುತ್ತದೆ. ಈ ದೃಶ್ಯ ನೋಡುಗರನ್ನು ರೋಮಾಂಚನಗೊಳಿಸುತ್ತದೆ.
ಶಿವನ ಸಮುದ್ರ ಕಾವೇರಿ ನದಿ ಸುಮಾರು 419 ಅಡಿ ಎತ್ತರದಿಂದ ಕಂದಕಕ್ಕೆ ಧುಮುಕುತ್ತದೆ. ಬಂಡೆಯ ಮೇಲಿಂದ ಭೋರ್ಗರೆಯುವ ಕಾವೇರಿಯ ಸೊಬಗನ್ನು ಹಿನ್ನೆಲೆಯಾಗಿರಿಸಿಕೊಂಡು ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…