gaganachukki flight festival
ಮಂಡ್ಯ : ಜಿಲ್ಲಾಧಿಕಾರಿ ಕುಮಾರ ಅವರು ಶನಿವಾರ ಸಂಜೆ ಗಗನ ಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮ ನಡೆಯುವ ಮಳವಳ್ಳಿ ತಾಲ್ಲೂಕಿನ ಮಲ್ಲಿಕ್ಯಾತನಹಳ್ಳಿ ಬಳಿ ಸ್ಥಳ ಪರಿಶೀಲನೆ ನಡೆಸಿದರು.
ಕಾರ್ಯಕ್ರಮದ ದಿನದಂದು ವಾಹನ ನಿಲುಗಡೆ ಪ್ರದೇಶದಲ್ಲಿ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಆಗಬೇಕು. ವಾಹನ ನಿಲುಗಡೆ ಸ್ಥಳದಲ್ಲಿ ಲೈಟಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೆಳಿಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಸಾರ್ವಜನಿಕರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದ್ದು, ಸರತಿ ಸಾಲಿನಲ್ಲಿ ನೂಕುನುಗ್ಗಲು ಉಂಟಾಗದಂತೆ ಬ್ಯಾರಿ ಕ್ಯಾಡಿಂಗ್ ಆಗಬೇಕು. ಹೆಚ್ಚಿನ ಕೌಂಟರ್ ಗಳನ್ನು ತೆರೆಯಬೇಕು, ಶುಚಿ ಹಾಗೂ ರುಚಿಯಾದ ಆಹಾರದ ವ್ಯವಸ್ಥೆ ಆಗಬೇಕು ಎಂದು ಸೂಚನೆ ನೀಡಿದರು.
ವೇದಿಕೆ ಸಮಿತಿ ಅವರು ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ವಿತರಣೆಯಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಉಪಸ್ಥಿತರಿದ್ದರು.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…