ಮಂಡ್ಯ

ಗಗನಚುಕ್ಕಿ ಜಲಪಾತೋತ್ಸವ : ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲಾಧಿಕಾರಿ ಕುಮಾರ ಅವರು ಶನಿವಾರ ಸಂಜೆ ಗಗನ ಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮ ನಡೆಯುವ ಮಳವಳ್ಳಿ ತಾಲ್ಲೂಕಿನ ಮಲ್ಲಿಕ್ಯಾತನಹಳ್ಳಿ ಬಳಿ ಸ್ಥಳ ಪರಿಶೀಲನೆ ನಡೆಸಿದರು.

ಕಾರ್ಯಕ್ರಮದ ದಿನದಂದು ವಾಹನ ನಿಲುಗಡೆ ಪ್ರದೇಶದಲ್ಲಿ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಆಗಬೇಕು. ವಾಹನ ನಿಲುಗಡೆ ಸ್ಥಳದಲ್ಲಿ ಲೈಟಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೆಳಿಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಸಾರ್ವಜನಿಕರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದ್ದು, ಸರತಿ ಸಾಲಿನಲ್ಲಿ ನೂಕುನುಗ್ಗಲು ಉಂಟಾಗದಂತೆ ಬ್ಯಾರಿ ಕ್ಯಾಡಿಂಗ್ ಆಗಬೇಕು. ಹೆಚ್ಚಿನ ಕೌಂಟರ್ ಗಳನ್ನು ತೆರೆಯಬೇಕು, ಶುಚಿ ಹಾಗೂ ರುಚಿಯಾದ ಆಹಾರದ ವ್ಯವಸ್ಥೆ ಆಗಬೇಕು ಎಂದು ಸೂಚನೆ ನೀಡಿದರು.

ವೇದಿಕೆ ಸಮಿತಿ ಅವರು ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ವಿತರಣೆಯಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

1 hour ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

1 hour ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

2 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

3 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

3 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

3 hours ago