ಮಂಡ್ಯ

ಸೆ.13,14 ರಂದು ಗಗನಚುಕ್ಕಿ ಜಲಪಾತೋತ್ಸವ

ಮಂಡ್ಯ : ಜನರ ಕಣ್ಮನ ಸೆಳೆಯುವ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಗಗನಚುಕ್ಕಿ ಜಲಪಾತದ ಉತ್ಸವವನ್ನು ಇದೇ ಸೆಪ್ಟೆಂಬರ್ 13 ಹಾಗೂ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರೂ ಆದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಶಾಸಕರು, ಗಗನಚುಕ್ಕಿ ಜಲಪಾತವನ್ನು ಉನ್ನತ ಪ್ರವಾಸಿ ತಾಣ ಮಾಡಿ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು 2 ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಾಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ರೊಟ್ಟಿಕಟ್ಟೆಯ ಬಳಿ ನೀರು ಸರಬರಾಜು ಕಾಮಗಾರಿ ನಡರಯುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಮಳ್ಳಿ ಕ್ಯಾತನಹಳ್ಳಿಯ ಬಳಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ವೇದಿಕೆಯ ಬಳಿ ಜಲಪಾತದ ಮನಮೋಹಕ ದೃಶ್ಯಗಳನ್ನು ಸವಿಯಲು ಎಲ್.ಇ.ಡಿ ವ್ಯವಸ್ಥೆ ಸಹ ಮಾಡಲಾಗುವುದು ಎಂದರು.

ಉಚಿತ ಬಸ್ ವ್ಯವಸ್ಥೆ
ಪ್ರವಾಸಿಗರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಹಾಗೂ ಸುಗಮ ವಾಹನ ಸಂಚಾರದ ದೃಷ್ಟಿಯಿಂದ ಮಳವಳ್ಳಿ ತಾಲ್ಲೂಕಿನಿಂದ ಗಗನಚುಕ್ಕಿಯ ವರೆಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಜಲಪಾತೋತ್ಸವ ನಡೆಯುವ ಸೆಪ್ಟೆಂಬರ್ 13 ಹಾಗೂ 14 ರಂದು ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಬೆಳಿಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಉಚಿತವಾಗಿ ಉಪಹಾರದ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಲಪಾತ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವ ರೀತಿ ಕುಳಿತಿಕೊಂಡು ವೀಕ್ಷಿಸಲು ಮೆಟ್ಟಿಲುಗಳು, ಲೈಟಿಂಗ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅಕ್ವ ಪಾಕ್೯ ಅಭಿವೃದ್ಧಿ ಪಡಿಸಲು ಚಿಂತಿಸಲಾಗುತ್ತಿದೆ. ಇದಲ್ಲದೆ ಪಿ.ಪಿ.ಪಿ ಮಾಡಲ್ ನಲ್ಲಿ ಉದ್ಯಾನವನ, ಜಲಕ್ರೀಡೆ ಮಾಡಲು ಸಹ ಯೋಜಿಸಲಾಗುತ್ತಿದೆ ಎಂದರು.

ಸ್ಥಳೀಯ ಕಲಾವಿದರಿಗೆ ಅವಕಾಶ ಎರಡು ದಿನಗಳ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11 ರಿಂದ 3 ಗಂಟೆಯವರೆಗೆ ಸ್ಥಳೀಯ ಕಲಾವಿದರ ಪ್ರದರ್ಶನಕ್ಕೆ ಅವಕಾಶ ಮಾಡಿಕಪಡಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಉತ್ತಮವಾದ 2 ಅಥವಾ 3 ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ಪ್ರದರ್ಶನ ನೀಡಲು ಅವಕಾಶ ನೀಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಉಪಸ್ಥಿತರಿದ್ದರು.

ಗಗನ ಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮಗಳ ವಿವರ
ಸೆಪ್ಟೆಂಬರ್ 13 ರಂದು ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 03.00 ಗಂಟೆಯವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು.
ಮಧ್ಯಾಹ್ನ 03:00 ರಿಂದ ಸಂಜೆ 06:00 ಗಂಟೆಯವರೆಗೆ ಸಾದ್ವಿನಿ ಕೊಪ್ಪ, ಸಾಕ್ಷಿ ಕೊಲ್ಲೂರು, ಹನುಮಂತ ಹಾಗೂ ಕಂಬದ ರಂಗಯ್ಯ ಗಾಯಕರಿಂದ ಜಾನಪದ ಸಂಗೀತ ಕಾರ್ಯಕ್ರಮ.
ಸಂಜೆ 06.00 ಗಂಟೆಗೆ ಶಿವರಾಜ್. ಕೆ.ಆರ್.ಪೇಟೆ ಮತ್ತು ಅವರ ತಂಡದ ವತಿಯಿಂದ ಕಾಮಿಡಿ ಶೋ ಕಾರ್ಯಕ್ರಮ.
ಸಂಜೆ 06.30 ಗಂಟೆಗೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಕಾರ್ಯಕ್ರಮದ ಉದ್ಘಾಟನೆ.
ಸಂಜೆ 07:30 ರಿಂದ ರಾತ್ರಿ 11:00 ರವರೆಗೆ ಅರ್ಜುನ್ ಜನ್ಯಾ ಮತ್ತು ಅವರ ತಂಡದಿಂದ ಹಾಗೂ ಖ್ಯಾತ ಗಾಯಕಿ ಮಂಗಲಿ ಅವರಿಂದ ಸಂಗೀತ ಕಾರ್ಯಕ್ರಮ,ಚಲನಚಿತ್ರ ನಟಿಯರಾದ ರಾಗಿಣಿ ತ್ರಿವೇದಿ, ಮನ್ವಿತ ಹರೀಶ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೆ.13 ರಂದು ಖ್ಯಾತ ಚಲನಚಿತ್ರ ನಟ ಡಾಲಿ ಧನಂಜಯ್ ರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್ 14 ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 03:00 ಗಂಟೆಯವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ.
ಮಧ್ಯಾಹ್ನ 03:00 ರಿಂದ ಸಂಜೆ 04.30 ಗಂಟೆಯವರೆಗೆ ಸವಿತಕ್ಕ, ರವಿ ಮೂರುರು, ಶ್ರೀಹರ್ಷ ಹಾಗೂ ಮಲ್ಲಿಕಾರ್ಜುನ ಕೆಂಕೆರೆ ಇವರಿಂದ ಜಾನಪದ ಸಂಗೀತ ಕಾರ್ಯಕ್ರಮ.
ಸಂಜೆ 04:30 ರಿಂದ 06:00 ಗಂಟೆಯವರೆಗೆ
ಬೆಂಗಳೂರಿನ Liquid Drums Fusion ತಂಡದಿಂದ Fusion Music Concert ಕಾರ್ಯಕ್ರಮ.
ಸಂಜೆ 06.00 ರಿಂದ 07.00 ಗಂಟೆಯವರೆಗೆ
ಗಂಗಾವತಿ ಪ್ರಾಣೇಶ್ ಮತ್ತು ತಂಡದಿಂದ ಕಾಮಿಡಿ ಶೋ ಕಾರ್ಯಕ್ರಮ. ಸಂಜೆ 07.00 ರಿಂದ 07.30 ಗಂಟೆಯವರೆಗೆ ಸಮಾರೋಪ ಕಾರ್ಯಕ್ರಮ ಮತ್ತು 07.30 ರಿಂದ 11: 00 ಗಂಟೆಯವರೆಗೆ ಗುರುಕಿರಣ್ ಹಾಗೂ ತಂಡದಿಂದ ಸಂಗೀತ ಕಾರ್ಯಕ್ರಮದ ಆಯೋಜಿಸಿದ್ದು, ಸಿನಿಮಾ ನಟಿಯರಾದ ಹರ್ಷಿಕ ಪೂಣಚ್ಚ ಮತ್ತು ಭಾವನಾ ನೃತ್ಯ ಪ್ರದರ್ಶಿಸಲಿದ್ದಾರೆ. ಸೆ.14 ರಂದು ಖ್ಯಾತ ಚಲನಚಿತ್ರ ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಲಪಾತೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಕಾರ್ಯಕ್ರಮಗಳ ವಿವಿಧ ಮಳಿಗೆಗಳನ್ನು ಪ್ರದರ್ಶಿಸಲಾಗುವುದು. ಲೇಸರ್ ಲೈಟ್ ಶೋ, ಸೌಂಡ್ ಅಂಡ್ ಲೈಟ್ಸ್ ಗಳನ್ನು ಸಹ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿರುತ್ತದೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago