ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ ಸ್ಟೀಲ್ ಕಂಬಿಗಳನ್ನು ಮುರಿದುಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸೋಮವಾರ ಇಲ್ಲಿನ ವ್ಯಾಪಾರಿಗಳು ಕಂಬಿಗಳನ್ನು ಮುರಿದಿರುವುದನ್ನು ನೋಡಿ ಆತಂಕಗೊಂಡಿದ್ದಾರೆ. ಗಗನ ಚುಕ್ಕಿ ಜಲಪಾತೋತ್ಸವದ ಸಂದರ್ಭದಲ್ಲಿ ಪ್ರವಾಸಿಗರಿಗೆ ನೆರವಾಗಲೆಂದು ಮೆಟ್ಟಿಲುಗಳ ಮೂಲಕ ಕೆಳಗೆ ಇಳಿಯುವ ಎರಡೂ ಬದಿಗಳಲ್ಲೂ ಹಾಕಲಾಗಿದ್ದ ಸ್ಟೀಲ್ ಕಂಬಿಗಳನ್ನು ಮುರಿದುಹಾಕಿವೆ.
ಈ ಸಂಬಂಧ ಲೋಕೋಪಯೋಗಿ ಇಂಜಿನಿಯರ್ ಸೋಮಶೇಖರ್ ಭೇಟಿ ನೀಡಿ ಆದಷ್ಟು ಬೇಗ ಕಂಬಿಗಳನ್ನು ದುರಸ್ತಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…