ಮಂಡ್ಯ : ಚಿಕ್ಕಮಂಡ್ಯ ಬಳಿಯಿದ್ದ 5 ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಸೋಮವಾರ ರಾತ್ರಿಯಿಡೀ ನಡೆಯಿತಾದರೂ ಮುಂಜಾನೆ 3 ಗಂಟೆ ವೇಳೆಗೆ ಭೂತನಹೊಸೂರು ಗ್ರಾಮದ ಹೆಬ್ಬಾಳದವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಬಳಿಕ ಅಧಿಕಾರಿಗಳ ಕಣ್ತಪ್ಪಿಸಿ 10 ಕಿ.ಮೀ ದೂರದ ತಾಲ್ಲೂಕಿನ ಕಟ್ಟೆದೊಡ್ಡಿ ಗ್ರಾಮದವರೆಗೆ ತಲುಪಲಷ್ಟೇ ಸಾಧ್ಯವಾಗಿದೆ.
ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿನಲ್ಲಿ ಕಟ್ಟೆದೊಡ್ಡಿ ಗ್ರಾಮದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ನೋಡಲು ಜನರು ಮುಗಿ ಬಿದ್ದಿದ್ದಾರೆ.ಸೋಮವಾರ ರಾತ್ರಿ ಕಾರ್ಯಾಚರಣೆ ವೇಳೆ ಬೂದನೂರು ರೈಲ್ವೇ ಟ್ರ್ಯಾಕ್ ಬಳಿ ಆನೆಗಳು ಸಿಕ್ಕಿ ಹಾಕಿಕೊಂಡ ಹಿನ್ನೆಲೆಯಲ್ಲಿ ಕೆಲ ಕಾಲ ಕಾರ್ಯಾಚರಣೆ ತಡವಾಯಿತು. ಮರಿ ಆನೆಯೊಂದು ಇರುವ ಕಾರಣ ಕಾಡಿಗಟ್ಟುವ ಕಾರ್ಯಾಚರಣೆ ವಿಳಂಬವಾಗುತ್ತಿದೆ.
ಬೆಂಗಳೂರಿನಿಂದ ಆಗಮಿಸಿರುವ ಇಸ್ರೇಲ್ ತಂತ್ರಜ್ಞಾನ ಪರಿಣಿತ ಅಧಿಕಾರಿಗಳ ತಂಡ ಆನೆಗಳನ್ನು ಕಾಡಿಗಟ್ಟುವ ಕುರಿತು ತಂತ್ರಗಳನ್ನು ರೂಪಿಸುತ್ತಿದ್ದಾರೆ.ಶಾಸಕ ಪಿ.ರವಿಕುಮಾರ್ ಗಣಿಗ ಅವರು ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ಕಾರ್ಯಾಚರಣೆ ವೇಳೆ ಉಸ್ತುವಾರಿ ನೋಡಿಕೊಂಡರು.ಬೆಳಿಗ್ಗೆ 9 ಗಂಟೆಯಲ್ಲಿ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿ ಚೈತ್ರಾ ಹಾಗೂ ಸಿಬ್ಬಂದಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…