ಮಂಡ್ಯ : ಚಿಕ್ಕಮಂಡ್ಯ ಬಳಿಯಿದ್ದ 5 ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಸೋಮವಾರ ರಾತ್ರಿಯಿಡೀ ನಡೆಯಿತಾದರೂ ಮುಂಜಾನೆ 3 ಗಂಟೆ ವೇಳೆಗೆ ಭೂತನಹೊಸೂರು ಗ್ರಾಮದ ಹೆಬ್ಬಾಳದವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಬಳಿಕ ಅಧಿಕಾರಿಗಳ ಕಣ್ತಪ್ಪಿಸಿ 10 ಕಿ.ಮೀ ದೂರದ ತಾಲ್ಲೂಕಿನ ಕಟ್ಟೆದೊಡ್ಡಿ ಗ್ರಾಮದವರೆಗೆ ತಲುಪಲಷ್ಟೇ ಸಾಧ್ಯವಾಗಿದೆ.
ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿನಲ್ಲಿ ಕಟ್ಟೆದೊಡ್ಡಿ ಗ್ರಾಮದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ನೋಡಲು ಜನರು ಮುಗಿ ಬಿದ್ದಿದ್ದಾರೆ.ಸೋಮವಾರ ರಾತ್ರಿ ಕಾರ್ಯಾಚರಣೆ ವೇಳೆ ಬೂದನೂರು ರೈಲ್ವೇ ಟ್ರ್ಯಾಕ್ ಬಳಿ ಆನೆಗಳು ಸಿಕ್ಕಿ ಹಾಕಿಕೊಂಡ ಹಿನ್ನೆಲೆಯಲ್ಲಿ ಕೆಲ ಕಾಲ ಕಾರ್ಯಾಚರಣೆ ತಡವಾಯಿತು. ಮರಿ ಆನೆಯೊಂದು ಇರುವ ಕಾರಣ ಕಾಡಿಗಟ್ಟುವ ಕಾರ್ಯಾಚರಣೆ ವಿಳಂಬವಾಗುತ್ತಿದೆ.
ಬೆಂಗಳೂರಿನಿಂದ ಆಗಮಿಸಿರುವ ಇಸ್ರೇಲ್ ತಂತ್ರಜ್ಞಾನ ಪರಿಣಿತ ಅಧಿಕಾರಿಗಳ ತಂಡ ಆನೆಗಳನ್ನು ಕಾಡಿಗಟ್ಟುವ ಕುರಿತು ತಂತ್ರಗಳನ್ನು ರೂಪಿಸುತ್ತಿದ್ದಾರೆ.ಶಾಸಕ ಪಿ.ರವಿಕುಮಾರ್ ಗಣಿಗ ಅವರು ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ಕಾರ್ಯಾಚರಣೆ ವೇಳೆ ಉಸ್ತುವಾರಿ ನೋಡಿಕೊಂಡರು.ಬೆಳಿಗ್ಗೆ 9 ಗಂಟೆಯಲ್ಲಿ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿ ಚೈತ್ರಾ ಹಾಗೂ ಸಿಬ್ಬಂದಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…