ಮಂಡ್ಯ : ಚಿಕ್ಕಮಂಡ್ಯ ಬಳಿಯಿದ್ದ 5 ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಸೋಮವಾರ ರಾತ್ರಿಯಿಡೀ ನಡೆಯಿತಾದರೂ ಮುಂಜಾನೆ 3 ಗಂಟೆ ವೇಳೆಗೆ ಭೂತನಹೊಸೂರು ಗ್ರಾಮದ ಹೆಬ್ಬಾಳದವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಬಳಿಕ ಅಧಿಕಾರಿಗಳ ಕಣ್ತಪ್ಪಿಸಿ 10 ಕಿ.ಮೀ ದೂರದ ತಾಲ್ಲೂಕಿನ ಕಟ್ಟೆದೊಡ್ಡಿ ಗ್ರಾಮದವರೆಗೆ ತಲುಪಲಷ್ಟೇ ಸಾಧ್ಯವಾಗಿದೆ.
ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿನಲ್ಲಿ ಕಟ್ಟೆದೊಡ್ಡಿ ಗ್ರಾಮದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ನೋಡಲು ಜನರು ಮುಗಿ ಬಿದ್ದಿದ್ದಾರೆ.ಸೋಮವಾರ ರಾತ್ರಿ ಕಾರ್ಯಾಚರಣೆ ವೇಳೆ ಬೂದನೂರು ರೈಲ್ವೇ ಟ್ರ್ಯಾಕ್ ಬಳಿ ಆನೆಗಳು ಸಿಕ್ಕಿ ಹಾಕಿಕೊಂಡ ಹಿನ್ನೆಲೆಯಲ್ಲಿ ಕೆಲ ಕಾಲ ಕಾರ್ಯಾಚರಣೆ ತಡವಾಯಿತು. ಮರಿ ಆನೆಯೊಂದು ಇರುವ ಕಾರಣ ಕಾಡಿಗಟ್ಟುವ ಕಾರ್ಯಾಚರಣೆ ವಿಳಂಬವಾಗುತ್ತಿದೆ.
ಬೆಂಗಳೂರಿನಿಂದ ಆಗಮಿಸಿರುವ ಇಸ್ರೇಲ್ ತಂತ್ರಜ್ಞಾನ ಪರಿಣಿತ ಅಧಿಕಾರಿಗಳ ತಂಡ ಆನೆಗಳನ್ನು ಕಾಡಿಗಟ್ಟುವ ಕುರಿತು ತಂತ್ರಗಳನ್ನು ರೂಪಿಸುತ್ತಿದ್ದಾರೆ.ಶಾಸಕ ಪಿ.ರವಿಕುಮಾರ್ ಗಣಿಗ ಅವರು ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ಕಾರ್ಯಾಚರಣೆ ವೇಳೆ ಉಸ್ತುವಾರಿ ನೋಡಿಕೊಂಡರು.ಬೆಳಿಗ್ಗೆ 9 ಗಂಟೆಯಲ್ಲಿ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿ ಚೈತ್ರಾ ಹಾಗೂ ಸಿಬ್ಬಂದಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…