ಮಂಡ್ಯ

ಕಟ್ಟೆದೊಡ್ಡಿಯಲ್ಲಿ ಬೀಡುಬಿಟ್ಟಿರುವ ಗಜಪಡೆ

ಮಂಡ್ಯ : ಚಿಕ್ಕಮಂಡ್ಯ ಬಳಿಯಿದ್ದ 5 ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಸೋಮವಾರ ರಾತ್ರಿಯಿಡೀ ನಡೆಯಿತಾದರೂ ಮುಂಜಾನೆ 3 ಗಂಟೆ ವೇಳೆಗೆ ಭೂತನಹೊಸೂರು ಗ್ರಾಮದ ಹೆಬ್ಬಾಳದವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಬಳಿಕ ಅಧಿಕಾರಿಗಳ ಕಣ್ತಪ್ಪಿಸಿ 10 ಕಿ.ಮೀ ದೂರದ ತಾಲ್ಲೂಕಿನ ಕಟ್ಟೆದೊಡ್ಡಿ ಗ್ರಾಮದವರೆಗೆ ತಲುಪಲಷ್ಟೇ ಸಾಧ್ಯವಾಗಿದೆ.

ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿನಲ್ಲಿ ಕಟ್ಟೆದೊಡ್ಡಿ ಗ್ರಾಮದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ನೋಡಲು ಜನರು ಮುಗಿ ಬಿದ್ದಿದ್ದಾರೆ.ಸೋಮವಾರ ರಾತ್ರಿ ಕಾರ್ಯಾಚರಣೆ ವೇಳೆ ಬೂದನೂರು ರೈಲ್ವೇ ಟ್ರ್ಯಾಕ್ ಬಳಿ ಆನೆಗಳು ಸಿಕ್ಕಿ ಹಾಕಿಕೊಂಡ ಹಿನ್ನೆಲೆಯಲ್ಲಿ ಕೆಲ ಕಾಲ ಕಾರ್ಯಾಚರಣೆ ತಡವಾಯಿತು. ಮರಿ ಆನೆಯೊಂದು ಇರುವ ಕಾರಣ ಕಾಡಿಗಟ್ಟುವ ಕಾರ್ಯಾಚರಣೆ ವಿಳಂಬವಾಗುತ್ತಿದೆ.

ಬೆಂಗಳೂರಿನಿಂದ ಆಗಮಿಸಿರುವ ಇಸ್ರೇಲ್ ತಂತ್ರಜ್ಞಾನ ಪರಿಣಿತ ಅಧಿಕಾರಿಗಳ ತಂಡ ಆನೆಗಳನ್ನು ಕಾಡಿಗಟ್ಟುವ ಕುರಿತು ತಂತ್ರಗಳನ್ನು ರೂಪಿಸುತ್ತಿದ್ದಾರೆ.ಶಾಸಕ ಪಿ.ರವಿಕುಮಾರ್ ಗಣಿಗ ಅವರು ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ಕಾರ್ಯಾಚರಣೆ ವೇಳೆ ಉಸ್ತುವಾರಿ ನೋಡಿಕೊಂಡರು.ಬೆಳಿಗ್ಗೆ 9 ಗಂಟೆಯಲ್ಲಿ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿ ಚೈತ್ರಾ ಹಾಗೂ ಸಿಬ್ಬಂದಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.

lokesh

Recent Posts

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

21 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

21 mins ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

2 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

3 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

3 hours ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

3 hours ago