ಮಂಡ್ಯ

ಕಟ್ಟೆದೊಡ್ಡಿಯಲ್ಲಿ ಬೀಡುಬಿಟ್ಟಿರುವ ಗಜಪಡೆ

ಮಂಡ್ಯ : ಚಿಕ್ಕಮಂಡ್ಯ ಬಳಿಯಿದ್ದ 5 ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಸೋಮವಾರ ರಾತ್ರಿಯಿಡೀ ನಡೆಯಿತಾದರೂ ಮುಂಜಾನೆ 3 ಗಂಟೆ ವೇಳೆಗೆ ಭೂತನಹೊಸೂರು ಗ್ರಾಮದ ಹೆಬ್ಬಾಳದವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಬಳಿಕ ಅಧಿಕಾರಿಗಳ ಕಣ್ತಪ್ಪಿಸಿ 10 ಕಿ.ಮೀ ದೂರದ ತಾಲ್ಲೂಕಿನ ಕಟ್ಟೆದೊಡ್ಡಿ ಗ್ರಾಮದವರೆಗೆ ತಲುಪಲಷ್ಟೇ ಸಾಧ್ಯವಾಗಿದೆ.

ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿನಲ್ಲಿ ಕಟ್ಟೆದೊಡ್ಡಿ ಗ್ರಾಮದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ನೋಡಲು ಜನರು ಮುಗಿ ಬಿದ್ದಿದ್ದಾರೆ.ಸೋಮವಾರ ರಾತ್ರಿ ಕಾರ್ಯಾಚರಣೆ ವೇಳೆ ಬೂದನೂರು ರೈಲ್ವೇ ಟ್ರ್ಯಾಕ್ ಬಳಿ ಆನೆಗಳು ಸಿಕ್ಕಿ ಹಾಕಿಕೊಂಡ ಹಿನ್ನೆಲೆಯಲ್ಲಿ ಕೆಲ ಕಾಲ ಕಾರ್ಯಾಚರಣೆ ತಡವಾಯಿತು. ಮರಿ ಆನೆಯೊಂದು ಇರುವ ಕಾರಣ ಕಾಡಿಗಟ್ಟುವ ಕಾರ್ಯಾಚರಣೆ ವಿಳಂಬವಾಗುತ್ತಿದೆ.

ಬೆಂಗಳೂರಿನಿಂದ ಆಗಮಿಸಿರುವ ಇಸ್ರೇಲ್ ತಂತ್ರಜ್ಞಾನ ಪರಿಣಿತ ಅಧಿಕಾರಿಗಳ ತಂಡ ಆನೆಗಳನ್ನು ಕಾಡಿಗಟ್ಟುವ ಕುರಿತು ತಂತ್ರಗಳನ್ನು ರೂಪಿಸುತ್ತಿದ್ದಾರೆ.ಶಾಸಕ ಪಿ.ರವಿಕುಮಾರ್ ಗಣಿಗ ಅವರು ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ಕಾರ್ಯಾಚರಣೆ ವೇಳೆ ಉಸ್ತುವಾರಿ ನೋಡಿಕೊಂಡರು.ಬೆಳಿಗ್ಗೆ 9 ಗಂಟೆಯಲ್ಲಿ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿ ಚೈತ್ರಾ ಹಾಗೂ ಸಿಬ್ಬಂದಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.

lokesh

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

4 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

5 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

5 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

5 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

9 hours ago