ಮಂಡ್ಯ

ಕಬಡ್ಡಿ ಪಂದ್ಯದ ವೇಳೆ ಗ್ಯಾಲರಿ ಕುಸಿತ ; ಓರ್ವ ಸಾವು, 13 ಮಂದಿಗೆ ಗಾಯ

ಮಂಡ್ಯ: ಕಬಡ್ಡಿ ಪಂದ್ಯಾವಳಿ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಸಾವನ್ನಪ್ಪಿ, ಮಕ್ಕಳು ಸೇರಿದಂತೆ 13 ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಗ್ರಾಮದ ಪಾಪಣ್ಣಚಾರಿ(50) ಮೃತಪಟ್ಟ ವ್ಯಕ್ತಿ. ಮಕ್ಕಳು ಸೇರಿದಂತೆ 13 ಮಂದಿ ಗಾಯಗೊಂಡು ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶ್ರೀಭೈರವ ಕಪ್ ಹೆಸರಿನಲ್ಲಿ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಪಂದ್ಯಾವಳಿ ನಿಗದಿ ಮಾಡಲಾಗಿತ್ತು. ಶನಿವಾರ ರಾತ್ರಿ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕಬ್ಬಿಣದಿಂದ ಅಳವಡಿಸಲಾಗಿದ್ದ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದಿದೆ. ಕುಸಿತದಿಂದ ಪಾಪಣ್ಣಚಾರಿ ಗ್ಯಾಲರಿ ಕೆಳಗೆ ಸಿಲುಕಿ, ಕೆಲವರನ್ನು ರಕ್ಷಿಸಿ ಬಳಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ 13 ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಪೃಥ್ವಿಗೌಡ, ಮನೀಶ್‌ಗೌಡ, ಜಗದೀಶ್, ಸೃಜನ್‌ಗೌಡ, ಸಮರ್ಥ, ಮದನ್, ಕೃಷ್ಣ, ಜೀವಿತ, ಮೋಹಿತ್‌ಗೌಡ, ಚಂದ್ರ, ರವಿ, ವಿಶ್ವಾಸ್, ಶಶಿ ಎಂಬುವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಆರು ಮಂದಿ ಮಕ್ಕಳಿದ್ದಾರೆ.

ಸಾವಿರಾರು ಜನರು ಸೇರುವ ಹಿನ್ನೆಲೆಯಲ್ಲಿ ಗ್ಯಾಲರಿ ಅಳವಡಿಸಲಾಗಿತ್ತು. ಕಡಿಮೆ ಸಾಮರ್ಥ್ಯದ ಕಬ್ಬಿಣ ಬಳಕೆ ಮಾಡಲಾಗಿತ್ತು ಎನ್ನಲಾಗಿದೆ. ಸಾಮರ್ಥ್ಯಕ್ಕಿಂತ ಹೆಚ್ಚು ವೀಕ್ಷಕರು ಕುಳಿತಿದ್ದರಿಂದ ಗ್ಯಾಲರಿ ಕುಸಿತವಾಗಿದೆ. ಕಡಿಮೆ ಸಾಮರ್ಥ್ಯ ಕಬ್ಬಿಣ, ಸರಿಯಾದ ಇಂಟರ್ ಲಾಕ್ ಬಳಸದೆ ಇರುವುದರಿಂದ ಘಟನೆ ಸಂಭವಿಸಿದೆ, ಗ್ಯಾಲರಿ ಅಳವಡಿಕೆ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ತಾಲ್ಲೂಕಿನ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

2 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

2 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

2 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

2 hours ago