ಮಂಡ್ಯ

ಗಾಂಧೀಜಿಯವರ ಕನಸು ಗ್ರಾಮ ಸ್ವರಾಜ್ಯ : ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ : ದೇಶ ಅಭಿವೃದ್ಧಿ ಹೊಂದಬೇಕೆಂದರೆ ಅಲ್ಲಿನ ಗ್ರಾಮಗಳು ಅಭಿವೃದ್ಧಿ ಹೊಂದಬೇಕು ಎಂಬುದು ಗಾಂಧೀಜಿಯವರ ಪರಿಕಲ್ಪನೆ ಆಗಿತ್ತು. ಗ್ರಾಮ ಸ್ವರಾಜ್ಯ ಎನ್ನುವಂತಹದ್ದು ಗಾಂಧೀಜಿಯವರ ಕನಸು ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಭಿಪ್ರಾಯಪಟ್ಟರು.

ಅವರು ಇಂದು ರೈತ ಸಂಘ, ಪುಟ್ಟಣ್ಣಯ್ಯ ಟ್ರಸ್ಟ್ ವತಿಯಿಂದ ಪಾಂಡವಪುರ ಕ್ರೀಡಾಂಗಣದಲ್ಲಿ ನಡೆದ ಸ್ವರಾಜ್ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಶೇಕಡಾ 15 ರಷ್ಟು ಜನ ಐಟಿಬಿಟಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಶೇಕಡಾ 60 ರಿಂದ 70 ರಷ್ಟು ಜನ ಸಣ್ಣ ಕೈಗಾರಿಕೆಗೆ ಮತ್ತು ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ಸಣ್ಣ ಕೈಗಾರಿಗೆ ಹಾಗೂ ಕೃಷಿ ಕ್ಷೇತ್ರ ಹೆಚ್ಚಿನ ಅಭಿವೃದ್ಧಿ ಹೊಂದಬೇಕೆಂಬುದೇ ಸ್ವರಾಜ್ ಉತ್ಸವದ ಸದುದ್ದೇಶ ಎಂದರು.

ಗ್ರಾಮಗಳ ಸಮಸ್ಯೆ ಪರಿಹಾರವಾಗಬೇಕು ಹಾಗೂ ಅಭಿವೃದ್ಧಿ ಹೊಂದಬೇಕು ಎಂದು ವಿವಿಧ ಸಂಸ್ಥೆಗಳ ಸಹಕಾರದೊಂದಿದೆ ಪ್ರಮುಖ 12 ಮಳಿಗೆಗಳ ಪ್ರದರ್ಶನವನ್ನು ನಡೆಸಲಾಗಿದ್ದು, ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಗ್ರಾಮ ಸಣ್ಣ ಕೈಗಾರಿಕೆ, ಕೃಷಿ ಹಾಗೂ ಕೈಗಾರಿಕೆಗಳ ಉತ್ಪನ್ನಗಳಿಗೆ ಅಗತ್ಯವಾದ ಉಪಉತ್ಪನ್ನಗಳನ್ನು ಗ್ರಾಮಗಳಲ್ಲಿಯೇ ಉತ್ಪಾದಿಸಬೇಕು. ಇತರರ ಮೇಲೆ ಅವಲಂಬಿತವಾಗದೆ ಗ್ರಾಮಗಳನ್ನು ಅಭಿವೃದ್ಧಿ ಪಡಿಸಬೇಕು ಎಂಬುವುದೇ ಸ್ವರಾಜ್ ಉತ್ಸವ. ಸ್ವರಾಜ್ ಉತ್ಸವದ ಪರಿಕಲ್ಪನೆಯನ್ನು ರೈತ ಸಂಘಗಳು ಒಗ್ಗೂಡಿ ರಾಜ್ಯದವರೆಗೆ ತಲುಪಿಸಬೇಕು ಎಂದು ರೈತರಿಗೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಹಾಗೂ ಪಾಂಡವಪುರ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೇಲುಕೋಟೆಯ ಪ್ರವಾಸೋದ್ಯಮ ಸಾಕ್ಷಾಚಿತ್ರ ಪ್ರದರ್ಶಿಸಲಾಯಿತು.

ಮಳಿಗೆಗಳು
ಕೃಷಿ, ಪ್ರವಾಸೋದ್ಯಮ, ಶಿಕ್ಷಣ, ಮಹಿಳಾ ಸಬಲೀಕರಣ, ಸಮಗ್ರ ಕೃಷಿ, ಆರೋಗ್ಯ, ಆಡಳಿತ, ಸಾಮಾಜಿಕ, ಪರಿಸರ, ತ್ಯಾಜ್ಯ, ಮೂಲಸೌಕರ್ಯ, ಹಾಗೂ ಉದ್ಯೋಗ ಎಂಬಂತೆ ಪ್ರಮುಖ 12 ವಿಷಯಗಳ ಕುರಿತು ವಿವಿಧ ಮಳಿಗೆಗಳನ್ನು ತೆರೆಯಲಾಗಿತ್ತು.

ಮೆರವಣಿಗೆ
ಕಾರ್ಯಕ್ರಮಕ್ಕೂ ಮುನ್ನ ಪಾಂಡವಪುರ ನಗರದ ಫೈಲೇಟ್ ವೃತ್ತದಿಂದ ಪಾಂಡವಪುರ ಕ್ರೀಡಾಂಗಣದವರೆಗೆ ಡೊಳ್ಳು, ವೀರಾಗಸೆ, ಕಳಸ ಹಾಗೂ ಎತ್ತಿನಗಾಡಿ ಮೂಲಕ ಸ್ವರಾಜ್ ಉತ್ಸವದ ಮೆರವಣಿಗೆ ಜರುಗಿತು.

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

5 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

6 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

7 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

7 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

8 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

11 hours ago