ಮಂಡ್ಯ

ತಾಲ್ಲೂಕಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ : ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ನಾಗಮಂಗಲ : ತಾಲ್ಲೂಕಿನಲ್ಲಿ ಸೆಪ್ಟೆಂಬರ್ 4 ರಂದು ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಪಾಂಡವಪುರ ಡಿ.ಒ.ಎಸ್.ಪಿ ಕಚೇರಿಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿರುವ ಆಯೋಜಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಸೆಪ್ಟೆಂಬರ್ 4 ರಂದು ಸುಮಾರು 11 ಗಣಪತಿಗಳ ವಿಸರ್ಜನೆಗೆ ಸಿದ್ಧತೆಯಾಗಿದ್ದು, ಮೆರವಣಿಗೆ ಸಾಗುವ ಸ್ಥಳಗಳಲ್ಲಿ ಸೂಕ್ತ ಬಂದೋಬಸ್ತ್ ಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆಯೋಜಕರು ಕೂಡ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳನ್ನು ಪಾಲಿಸಿ. ಈಗಾಗಲೇ ಬಂದೋಬಸ್ತ್ ಕೆಲಸಕ್ಕೆ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಇದನ್ನು ಓದಿ: ಮೈಸೂರು | ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿತ : ವ್ಯಕ್ತಿ ಕಣ್ಣಿಗೆ ಗಾಯ

ಸಾರ್ವಜನಿಕರು ಅವರೊಂದಿಗೆ ಸಹಕರಿಸಬೇಕು ಎಂದರು. ಈ ಬಾರಿ ಪೊಲೀಸ್ ಇಲಾಖೆಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಸಮಾಜದ ಶಾಂತಿ , ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಕೋಮು ಗಲಭೆ ಉಂಟುಮಾಡುವ ರೀತಿ ಯಾವುದಾದರೂ ಪ್ರಯತ್ನ ನಡೆದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗಣಪತಿ ಹಬ್ಬವು ಸಮಾಜಕ್ಕೆ ಒಳಿತಾಗಲಿ ಎಂದು ಆಚರಿಸುವ ಹಬ್ಬ. ಸಮಾಜದ ಮುಖಂಡರು, ಸ್ವಯಂ‌ ಸೇವಾ ಸಂಸ್ಥೆಗಳು, ಸಾರ್ವಜನಿಕರು ತಮ್ಮ ಸುತ್ತಮುತ್ತಲು ಯಾವುದೇ ಅಹಿತಕರ ಘಟನೆಯಾಗದಂತೆ ಎಚ್ಚರಿಕೆ ವಹಿಸಿ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿ.ಒ.ಎಸ್.ಪಿ ಡಿ ಚಲುವರಾಜು, ತಹಶೀಲ್ದಾರ್ ಆದರ್ಶ, ಸಿ.ಪಿ.ಐ ನಿರಂಜನ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

12 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

12 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

12 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

12 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

12 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

12 hours ago