ಮಂಡ್ಯ

ಗಾಂಜಾ ಸಾಗಣೆ : ಮೂವರ ಬಂಧನ

ಕೆ.ಆರ್.ಪೇಟೆ : ತಾಲ್ಲೂಕಿನ ಚಿಕ್ಕೋನಹಳ್ಳಿ ಹೌಸಿಂಗ್ ಬೋರ್ಡ್ ಬಡಾವಣೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಬಂಧಿಸಿದ್ದಾರೆ.

ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಹಾಗೂ ಅಬಕಾರಿ ಉಪ ಆಯುಕ್ತ ಡಾ.ಆರ್.ನಾಗಶಯನ ಅವರ ನಿರ್ದೇಶನದ ಮೇರೆಗೆ ಅಬಕಾರಿ ಉಪ ಅಧಿಕ್ಷಕಿ ರಾಧಾಮಣಿ ಅವರ ನೇತೃತ್ವದಲ್ಲಿ ಪಾಂಡವಪುರ ವಿಭಾಗದ ಅಬಕಾರಿ ನಿರೀಕ್ಷಕ ವೈ.ಜೆ.ಪ್ರಫುಲ್ಲ ಚಂದ್ರ ಹಾಗೂ ಕೆ.ಆರ್.ಪೇಟೆ ಅಬಕಾರಿ ಅಧಿಕಾರಿ ದೀಪಕ್, ಸಿಬ್ಬಂದಿ ಖಚಿತ ಮಾಹಿತಿಯ ಮೇರೆಗೆ ಮಿಂಚಿನ ಕಾರ್ಯಾಚರಣೆ ನಡೆಸಿ ೩.೫ ಲಕ್ಷ ರೂ. ಬೆಲೆ ಬಾಳುವ ಸುಮಾರು ೫ ಕೆ.ಜಿ. ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಗಾಂಜಾ ಸಾಗಿಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು, ಗಾಂಜಾ ಸಾಗಿಸುತ್ತಿದ್ದ ಪಾಂಡವಪುರದ ಉಮ್ರಾಜ್ ಬೇಗ್ ಅಲಿಯಾಸ್ ಮುಜುನು, ಜಬಿವುಲ್ಲಾ ಅಬ್ದುಲ್ ರಹೀಮ್, ಚನ್ನರಾಯಪಟ್ಟಣದ ಸೈಯದ್ ಹುಸೇನ್ ಅಲಿಯಾಸ್ ತೌಫಿಕ್ ಸೈಯದ್ ಆಸೀಫ್ ಉಲ್ಲಾ ಎಂಬ ಮೂವರು ಆರೋಪಿಗಳನ್ನು ಬಂಽಸಿ, ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅಬಕಾರಿ ಸಿಬ್ಬಂದಿಗಳಾದ ಎಚ್.ವಿ.ರಾಮು, ಪಿ.ಜಿ.ದಿಲೀಪ್ ಕುಮಾರ್, ಎನ್.ದಿನೇಶ್, ಜಿ.ಎನ್.ಸಂದೀಪ್, ಮುಖ್ಯ ಪೇದೆ ವೈರಮುಡಿ, ಎಂ.ಜಿ.ನಾಗರಾಜು, ಸಂದೀಪ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಽಸಿರುವ ಅಬಕಾರಿ ಅಽಕಾರಿಗಳ ತಂಡವನ್ನು ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಅವರ ಹಾಗೂ ಅಬಕಾರಿ ಉಪ ಆಯುಕ್ತ ಡಾ.ಆರ್.ನಾಗಶಯನ ಅವರು ಅಭಿನಂದಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

13 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

14 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

15 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

16 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

17 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

18 hours ago