Ganja Smuggling: Three Arrested
ಕೆ.ಆರ್.ಪೇಟೆ : ತಾಲ್ಲೂಕಿನ ಚಿಕ್ಕೋನಹಳ್ಳಿ ಹೌಸಿಂಗ್ ಬೋರ್ಡ್ ಬಡಾವಣೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಬಂಧಿಸಿದ್ದಾರೆ.
ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಹಾಗೂ ಅಬಕಾರಿ ಉಪ ಆಯುಕ್ತ ಡಾ.ಆರ್.ನಾಗಶಯನ ಅವರ ನಿರ್ದೇಶನದ ಮೇರೆಗೆ ಅಬಕಾರಿ ಉಪ ಅಧಿಕ್ಷಕಿ ರಾಧಾಮಣಿ ಅವರ ನೇತೃತ್ವದಲ್ಲಿ ಪಾಂಡವಪುರ ವಿಭಾಗದ ಅಬಕಾರಿ ನಿರೀಕ್ಷಕ ವೈ.ಜೆ.ಪ್ರಫುಲ್ಲ ಚಂದ್ರ ಹಾಗೂ ಕೆ.ಆರ್.ಪೇಟೆ ಅಬಕಾರಿ ಅಧಿಕಾರಿ ದೀಪಕ್, ಸಿಬ್ಬಂದಿ ಖಚಿತ ಮಾಹಿತಿಯ ಮೇರೆಗೆ ಮಿಂಚಿನ ಕಾರ್ಯಾಚರಣೆ ನಡೆಸಿ ೩.೫ ಲಕ್ಷ ರೂ. ಬೆಲೆ ಬಾಳುವ ಸುಮಾರು ೫ ಕೆ.ಜಿ. ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಗಾಂಜಾ ಸಾಗಿಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು, ಗಾಂಜಾ ಸಾಗಿಸುತ್ತಿದ್ದ ಪಾಂಡವಪುರದ ಉಮ್ರಾಜ್ ಬೇಗ್ ಅಲಿಯಾಸ್ ಮುಜುನು, ಜಬಿವುಲ್ಲಾ ಅಬ್ದುಲ್ ರಹೀಮ್, ಚನ್ನರಾಯಪಟ್ಟಣದ ಸೈಯದ್ ಹುಸೇನ್ ಅಲಿಯಾಸ್ ತೌಫಿಕ್ ಸೈಯದ್ ಆಸೀಫ್ ಉಲ್ಲಾ ಎಂಬ ಮೂವರು ಆರೋಪಿಗಳನ್ನು ಬಂಽಸಿ, ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಅಬಕಾರಿ ಸಿಬ್ಬಂದಿಗಳಾದ ಎಚ್.ವಿ.ರಾಮು, ಪಿ.ಜಿ.ದಿಲೀಪ್ ಕುಮಾರ್, ಎನ್.ದಿನೇಶ್, ಜಿ.ಎನ್.ಸಂದೀಪ್, ಮುಖ್ಯ ಪೇದೆ ವೈರಮುಡಿ, ಎಂ.ಜಿ.ನಾಗರಾಜು, ಸಂದೀಪ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಽಸಿರುವ ಅಬಕಾರಿ ಅಽಕಾರಿಗಳ ತಂಡವನ್ನು ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಅವರ ಹಾಗೂ ಅಬಕಾರಿ ಉಪ ಆಯುಕ್ತ ಡಾ.ಆರ್.ನಾಗಶಯನ ಅವರು ಅಭಿನಂದಿಸಿದ್ದಾರೆ.
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…