ಮಂಡ್ಯ: ಅಡುಗೆ ಮನೆಯ ಗ್ಯಾಸ್ ಸೋರಿಕೆಯಿಂದಾಗಿ ಅಡುಗೆ ಮನೆ ಸೇರಿದಂತೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಟೌನ್ ಗಂಜಾಂನಲ್ಲಿ ನಡೆದಿದೆ.
ಇಂದು(ಮೇ.೧೨) ಬೆಳಿಗ್ಗಿನ ತಿಂಡಿಗೆಂದು ಅಡುಗೆ ಮಾಡುವ ವೇಳೆ ಬೆಂಕಿ ಹೊತ್ತಿದ್ದು, ಭಯಬೀತರಾದ ಮನೆಯವರು ತಕ್ಷಣ ಹೊರಗೆ ಓಡಿ ಬಂದು ಬಳಿಕ ಬೆಂಕಿ ನಂದಿಸಿದ್ದಾರೆ. ನಿಮಿಷಾಂಭ ದೇವಾಲಯದ ಅರ್ಚಕ ಸುಬ್ರಾಯ್ಭಟ್ ಅವರ ಮನೆಯಲ್ಲಿ ಈ ಘಟನೆ ಜರುಗಿದ್ದು, ಸಣ್ಣಪುಟ್ಟ ಗಾಯದೊಂದಿಗೆ ಅಡುಗೆ ಮನೆಯಲ್ಲಿಯೇ ಇದ್ದ ಅರ್ಚಕರು ಪಾರಾಗಿದ್ದಾರೆ.
ಅಡುಗೆ ಅನಿಲ ಸೋರಿಕೆಯಿಂದ ಈ ರೀತಿಯ ಅಹಿತಕರ ಘಟನೆಗಳು ಅಲ್ಲಲ್ಲಿ ವರದಿಯಾಗುತ್ತಲೇ ಇವೆ. ಬಹುತೇಕ ಸಂದಂರ್ಭದಲ್ಲಿ ಜನರ ಅಜಾಗೃಕತೆಯಿಂದಾಗಿ ಇಂತಹ ಅಹಿತಕರ ಘಟನೆ ಸಂಭಂವಿಸುತ್ತಿದೆ. ಗ್ರಾಮೀಣ ಭಾಗಗಳು ಸೇರಿದಂತೆ ಇತರೆಡೆ ಸರ್ಕಾರ ಹಾಗೂ ಅಡುಗೆ ಅನಿಲ ವಿತರಕ ಕಂಪನಿಗಳು, ಏಜೆನ್ಸಿಗಳು ಅಡುಗೆ ಅನಿಲ ಸುರಕ್ಷತೆ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿಗಳನ್ನು ಹಮ್ಮಿಕೊಳ್ಳಬೇಕಾಗಿದೆ.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…