ಮಂಡ್ಯ

ಗೌರಿ ಗಣೇಶ ಹಬ್ಬ: ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ರೀತ್ಯಾ ಕ್ರಮ: ಮಲ್ಲಿಕಾರ್ಜುನ ಬಾಲದಂಡಿ

ಮಂಡ್ಯ: ಗೌರಿ ಗಣೇಶ ಹಬ್ಬ ಹಾಗೂ ಈದ್‌ ಮೀಲದ್‌ ಎರಡು ಹಬ್ಬಗಳು ಜೊತೆ ಜೊತೆಗೆ ಬಂದಿರುವುದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ, ಗೊಂದಲಮಯ ವಾತಾವರಣ ಸೃಷ್ಟಿ ಮಾಡದಂತೆ ಎಚ್ಚರಿಕೆ ವಹಿಸಿ ಹಬ್ಬ ಆಚರಣೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್‌ ಕಾವೇರಿ ಸಭಾಂಗಣದಲ್ಲಿ ನಡೆದ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆ ಸಂಬಂಧ ಸೌಹರ್ದತೆ ಸಭೆ ನಡೆಸಿ ಅವರು ಮಾತನಾಡಿದರು.

ಅನುಮತಿ ಇಲ್ಲದ ಕಡೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ. ಮೆರವಣಿಗೆ ಹೋಗುವ ರೂಟ್ ಮ್ಯಾಪ್ ನ್ನು ಪೊಲೀಸ್ ಇಲಾಖೆಗೆ ಒದಗಿಸಬೇಕು. ಕೆಲವು ವಿವಾದಾತ್ಮಕ ಸ್ಥಳಗಳಿರುತ್ತವೆ, ಆ ಸ್ಥಳದಲ್ಲಿ ಗಣಪತಿ ಪ್ರತಿಷ್ಠಾಪಿಸುವ ಬದಲು ಬೇರೆ ಸ್ಥಳಗಳನ್ನು ಆಯ್ಕೆ ಮಾಡಿ ಎಂದರು.

ಮಂಟಪ ಹಾಕುವ ಸಮಯದಲ್ಲಿ ಸರಿಯಾದ ಜಾಗ ಆಯ್ಕೆ ಮಾಡಬೇಕು, ವಿಗ್ರಹವು 5 ಅಡಿಗಿಂತ ಹೆಚ್ಚಿದ್ದರೆ ಮೆರವಣಿಗೆ ಹೋಗುವ ಸಮಯದಲ್ಲಿ ಕರೆಂಟ್ ವೈರ್ ಗಳಿಗೆ ಮಾವಿನ ತೋರಣಗಳು ತಗುಲಿ ಕೆಲವೊಂದು ಕಡೆ ಅಹಿತಕರ ಘಟನೆಗಳು ಸಂಭವಿಸಬಹುದು. ಕತ್ತಲಲ್ಲಿ ಗಣಪತಿ ವಿಸರ್ಜನೆ ಮಾಡುವಾಗ ನೀರಿನಲ್ಲಿ ಮುಳುಗುವ ಅವಘಡ ಸಂಭವಿಸಬಹುದು ಬೆಳಕಿನ ವ್ಯವಸ್ಥೆ ಮಾಡಿಕೊಳ್ಳಿ ಎಂದರು.

ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕು.

ನೈಸರ್ಗಿಕವಾಗಿ ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಟ್ಯಾಂಕ್‌ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲಾಗುವುದು ಅದರಂತೆ ಪರಿಸರ, ಜಲ ಮಾಲಿನ್ಯ ಮಾಡದೆ ಕಸವನ್ನು ವಾಹನದಲ್ಲಿ ಹಾಕಬೇಕು ಎಂದರು.

ಸಾರ್ವಜನಿಕವಾಗಿ ಇಡಲಾಗುವ ಗಣೇಶ ಮೂರ್ತಿಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಈ ಅನುಮತಿ ಪತ್ರಗಳಲ್ಲಿ ಲೈಸನ್ಸ್ ನೀಡುವ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಪ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸಬೇಕು ಇಲ್ಲವಾದಲ್ಲಿ ಕ್ರಮ ಕೈಗೊಳ್ಳಬೇಕಾದಿತು ಎಂದು ಎಚ್ಚರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

2 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

4 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

4 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

6 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

6 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

6 hours ago