ಮಂಡ್ಯ: ಗೌರಿ ಗಣೇಶ ಹಬ್ಬ ಹಾಗೂ ಈದ್ ಮೀಲದ್ ಎರಡು ಹಬ್ಬಗಳು ಜೊತೆ ಜೊತೆಗೆ ಬಂದಿರುವುದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ, ಗೊಂದಲಮಯ ವಾತಾವರಣ ಸೃಷ್ಟಿ ಮಾಡದಂತೆ ಎಚ್ಚರಿಕೆ ವಹಿಸಿ ಹಬ್ಬ ಆಚರಣೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆ ಸಂಬಂಧ ಸೌಹರ್ದತೆ ಸಭೆ ನಡೆಸಿ ಅವರು ಮಾತನಾಡಿದರು.
ಅನುಮತಿ ಇಲ್ಲದ ಕಡೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ. ಮೆರವಣಿಗೆ ಹೋಗುವ ರೂಟ್ ಮ್ಯಾಪ್ ನ್ನು ಪೊಲೀಸ್ ಇಲಾಖೆಗೆ ಒದಗಿಸಬೇಕು. ಕೆಲವು ವಿವಾದಾತ್ಮಕ ಸ್ಥಳಗಳಿರುತ್ತವೆ, ಆ ಸ್ಥಳದಲ್ಲಿ ಗಣಪತಿ ಪ್ರತಿಷ್ಠಾಪಿಸುವ ಬದಲು ಬೇರೆ ಸ್ಥಳಗಳನ್ನು ಆಯ್ಕೆ ಮಾಡಿ ಎಂದರು.
ಮಂಟಪ ಹಾಕುವ ಸಮಯದಲ್ಲಿ ಸರಿಯಾದ ಜಾಗ ಆಯ್ಕೆ ಮಾಡಬೇಕು, ವಿಗ್ರಹವು 5 ಅಡಿಗಿಂತ ಹೆಚ್ಚಿದ್ದರೆ ಮೆರವಣಿಗೆ ಹೋಗುವ ಸಮಯದಲ್ಲಿ ಕರೆಂಟ್ ವೈರ್ ಗಳಿಗೆ ಮಾವಿನ ತೋರಣಗಳು ತಗುಲಿ ಕೆಲವೊಂದು ಕಡೆ ಅಹಿತಕರ ಘಟನೆಗಳು ಸಂಭವಿಸಬಹುದು. ಕತ್ತಲಲ್ಲಿ ಗಣಪತಿ ವಿಸರ್ಜನೆ ಮಾಡುವಾಗ ನೀರಿನಲ್ಲಿ ಮುಳುಗುವ ಅವಘಡ ಸಂಭವಿಸಬಹುದು ಬೆಳಕಿನ ವ್ಯವಸ್ಥೆ ಮಾಡಿಕೊಳ್ಳಿ ಎಂದರು.
ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕು.
ನೈಸರ್ಗಿಕವಾಗಿ ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಟ್ಯಾಂಕ್ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲಾಗುವುದು ಅದರಂತೆ ಪರಿಸರ, ಜಲ ಮಾಲಿನ್ಯ ಮಾಡದೆ ಕಸವನ್ನು ವಾಹನದಲ್ಲಿ ಹಾಕಬೇಕು ಎಂದರು.
ಸಾರ್ವಜನಿಕವಾಗಿ ಇಡಲಾಗುವ ಗಣೇಶ ಮೂರ್ತಿಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಈ ಅನುಮತಿ ಪತ್ರಗಳಲ್ಲಿ ಲೈಸನ್ಸ್ ನೀಡುವ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಪ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸಬೇಕು ಇಲ್ಲವಾದಲ್ಲಿ ಕ್ರಮ ಕೈಗೊಳ್ಳಬೇಕಾದಿತು ಎಂದು ಎಚ್ಚರಿಸಿದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…