ಮಂಡ್ಯ

GDP: ದೇಶದಲ್ಲಿ ನಾವೇ ನಂಬರ್‌ ಒನ್:‌ ಸಿಎಂ ಸಿದ್ದರಾಮಯ್ಯ

ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದರು.

GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು.

ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗಧಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.

ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು.

ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದರು‌.

ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ಕೆ.ಆರ್.ಪೇಟೆ ರಸ್ತೆ, ಕೆರೆ, ಸೇತುವೆಗೆ ಹಣ ಕೊಡ್ತೀನಿ

ಕೆ.ಆರ್.ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀನಿ ಎಂದು ಭರವಸೆ ನೀಡಿದರು.‌

ದಿನಕ್ಕೆ 5 ಕೋಟಿ ಹಾಲು ಉತ್ಪಾದಕರಿಗೆ ಕೊಡ್ತಾ ಇದ್ದೀವಿ

ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ ಎಂದು ಲೆಕ್ಕ ವಿವರಿಸಿದರು.

ನಾವು ಒಂದು ಕಡೆ ರೈತರಿಗೆ ಶಕ್ತಿ ತುಂಬುತ್ತಿದ್ದೇವೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಎಸಗುತ್ತಿದೆ. ರಾಜ್ಯದ ರೈತರಿಗೆ ನಬಾರ್ಡ್ ನಿಂದ ಕೊಡುವ ಸಬ್ಸಿಡಿ ಸಾಲದ ಪ್ರಮಾಣವನ್ನು ಶೇ58 ರಷ್ಟು ಕಡಿತಗೊಳಿಸಿದೆ. ಬರೀ ಭಾಷಣ ಮಾಡಿದರೆ ರೈತರ ಬದುಕು ಉದ್ದಾರ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಯ ಭಾಷಣದ ನೀತಿಯನ್ನು ಟೀಕಿಸಿದರು‌.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

8 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

8 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

8 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

8 hours ago