ಮಂಡ್ಯ

ಮಂಡ್ಯ: ಶಾಲೆಯ ಅವ್ಯವಸ್ಥೆ ಬಗ್ಗೆ ಶಾಸಕರ ಗಮನಕ್ಕೆ ತಂದ ಬಾಲಕಿ

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಇಂದು ಶ್ರೀ ವೀರಭದ್ರೇಶ್ವರ ಅಗ್ನಿ ಕೊಂಡೋತ್ಸವದ ನಿಮಿತ್ತ ಪೂರ್ವಭಾವಿ ಸಭೆ ನಡೆಸುವ ಸಂದರ್ಭದಲ್ಲಿ ಶಾಸಕ ರವಿಕುಮಾರ್‌ ಅವರಿಗೆ ವಿದ್ಯಾರ್ಥಿನಿಯೋರ್ವಳು ಶಾಲೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದಿದ್ದಾಳೆ.

ಆಲಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ನಮನ ಎಂಬ ವಿದ್ಯಾರ್ಥಿನಿಯು ನಮಮ್‌ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದೆ. ಹಾಗಾಗಿ ಸರಿಯಾದ ಸಮಯಕ್ಕೆ ಪಾಠ-ಪ್ರವಚನಗಳು ನಡೆಯುತ್ತಿಲ್ಲ. ಹೀಗಾಗಿ ಖಾಲಿಯಿರುವ ಶಿಕ್ಷಕರ ಹುದ್ದೆಗೆ ಹೊಸ ಶಿಕ್ಷಕರನ್ನು ನಿಯೋಜಿಸುವಂತೆ ಮನವಿ ಮಾಡಿದ್ದಾಳೆ. ಇದರ ಜೊತೆಗೆ ಶಾಲೆಯ ಕೊಠಡಿ ಕೂಡ ಶಿಥಿಲಗೊಂಡಿದೆ. ಆದ್ದರಿಂದ ನಾವು ಭಯದಲ್ಲೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಶಿಥಿಲಗೊಂಡಿರುವ ಕಟ್ಟಡವನ್ನು ಸರಿಪಡಿಸಿ ಎಂದು ಶಾಸಕರ ಗಮನಕ್ಕೆ ತಂದರು. ಈ ವೇಳೆ ಶಾಸಕ ರವಿಕುಮಾರ್‌ ಅವರು ಕ್ಷಣದಲ್ಲೇ ಶಾಸಕರ ಅನುದಾನದಲ್ಲಿ 5 ಲಕ್ಷ ಅನುದಾನವನ್ನು ಮಂಜೂರು ಮಾಡಿ ಶಾಲೆಗೆ ಶಿಕ್ಷಕರನ್ನು ನಿಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

9 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

9 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

9 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

10 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

10 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

10 hours ago