ಮಂಡ್ಯ

ಮಂಡ್ಯ: ಶಾಲೆಯ ಅವ್ಯವಸ್ಥೆ ಬಗ್ಗೆ ಶಾಸಕರ ಗಮನಕ್ಕೆ ತಂದ ಬಾಲಕಿ

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಇಂದು ಶ್ರೀ ವೀರಭದ್ರೇಶ್ವರ ಅಗ್ನಿ ಕೊಂಡೋತ್ಸವದ ನಿಮಿತ್ತ ಪೂರ್ವಭಾವಿ ಸಭೆ ನಡೆಸುವ ಸಂದರ್ಭದಲ್ಲಿ ಶಾಸಕ ರವಿಕುಮಾರ್‌ ಅವರಿಗೆ ವಿದ್ಯಾರ್ಥಿನಿಯೋರ್ವಳು ಶಾಲೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದಿದ್ದಾಳೆ.

ಆಲಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ನಮನ ಎಂಬ ವಿದ್ಯಾರ್ಥಿನಿಯು ನಮಮ್‌ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದೆ. ಹಾಗಾಗಿ ಸರಿಯಾದ ಸಮಯಕ್ಕೆ ಪಾಠ-ಪ್ರವಚನಗಳು ನಡೆಯುತ್ತಿಲ್ಲ. ಹೀಗಾಗಿ ಖಾಲಿಯಿರುವ ಶಿಕ್ಷಕರ ಹುದ್ದೆಗೆ ಹೊಸ ಶಿಕ್ಷಕರನ್ನು ನಿಯೋಜಿಸುವಂತೆ ಮನವಿ ಮಾಡಿದ್ದಾಳೆ. ಇದರ ಜೊತೆಗೆ ಶಾಲೆಯ ಕೊಠಡಿ ಕೂಡ ಶಿಥಿಲಗೊಂಡಿದೆ. ಆದ್ದರಿಂದ ನಾವು ಭಯದಲ್ಲೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಶಿಥಿಲಗೊಂಡಿರುವ ಕಟ್ಟಡವನ್ನು ಸರಿಪಡಿಸಿ ಎಂದು ಶಾಸಕರ ಗಮನಕ್ಕೆ ತಂದರು. ಈ ವೇಳೆ ಶಾಸಕ ರವಿಕುಮಾರ್‌ ಅವರು ಕ್ಷಣದಲ್ಲೇ ಶಾಸಕರ ಅನುದಾನದಲ್ಲಿ 5 ಲಕ್ಷ ಅನುದಾನವನ್ನು ಮಂಜೂರು ಮಾಡಿ ಶಾಲೆಗೆ ಶಿಕ್ಷಕರನ್ನು ನಿಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

3 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

3 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

8 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago