ಮಂಡ್ಯ

ಆಸ್ಪತ್ರೆಗೆ ಬರುವ ಮುನ್ನವೇ ಬಾಲಕಿ ಸಾವು : ಕುಪಿತಗೊಂಡ ಗುಂಪೊಂದು ವೈದ್ಯರ ಮೇಲೆ ಹಲ್ಲೆಗೆ ಯತ್ನ ; ದೂರು ದಾಖಲು

ಮಳವಳ್ಳಿ: ಅನಾರೋಗ್ಯದಿಂದ ಅಸ್ವಸ್ಥತಗೊಂಡಿದ್ದ ಬಾಲಕಿಯೊಬ್ಬಳು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಬರುವ ಮುನ್ನವೇ ಸಾವನ್ನಪ್ಪಿದ್ದರಿಂದ ಆಕ್ರೋಶಗೊಂಡ ಬಾಲಕಿಯ ಸಂಬಂಧಿಕರು ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿ ಆಸ್ಪತ್ರೆ ಕಿಟಕಿಯ ಗಾಜು ಹಾಗೂ ಸಲಕರಣೆಗಳನ್ನು ಧ್ವಂಸಗೊಳಿಸಿರುವ ಘಟನೆ ಗುರುವಾರ ನಡೆದಿದೆ.

ಮೂಲತಃ ಕೊಳ್ಳೇಗಾಲ ಪಟ್ಟಣದ ಲೇ.ಜಕಾಉಲ್ಲಾ ಎಂಬುವವರ ಪುತ್ರಿ ೧೭ ವರ್ಷ ಬಾಲಕಿ ಮೃತಪಟ್ಟು ದುರೈವಿಯಾಗಿದ್ದು, ಕೆಲ ದಿನಗಳ ಹಿಂದೆ ಹಲಗೂರಿನ ತನ್ನ ಅಜ್ಜಿ ಮನೆಗೆ ಬಂದಿದ್ದ ಬಾಲಕಿಗೆ ಜ್ವರ ಕಾಣಿಸಿಕೊಂಡಿತ್ತು. ಬಾಲಕಿಗೆ ಬುಧವಾರ ಹಲಗೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.
ತೀವ್ರವಾಗಿ ಅಸ್ವಸ್ಥತಗೊಂಡಿದ್ದ ಬಾಲಕಿಯನ್ನು ಗುರುವಾರ ಬೆಳಿಗ್ಗೆ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಆಸ್ಪತ್ರೆಗೆ ಬರುವ ಮುನ್ನ ಬಾಲಕಿ ಮೃತಪಟ್ಟಿದ್ದಳು ಎನ್ನಲಾಗಿದೆ.

ಬಾಲಕಿಯ ಬಾಯಲ್ಲಿ ನೊರೆ ಬರುತ್ತಿದ್ದನ್ನು ಗಮನಿಸಿದ ಆಸ್ಪತ್ರೆಯ ಕರ್ತವ್ತನಿರತ ಡಾ.ಮುರುಳಿ ಅವರು ಪರೀಕ್ಷೆ ನಡೆಸಿದಾಗ ಆಕೆ ಬರುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರಿಗೆ ತಿಳಿಸಿದ್ದಾರೆ. ಇದರಿಂದ ಕುಪಿತರಾದ ಮೃತ ಯುವತಿಯ ಕೆಲ ಸಂಬಂಧಿಕರು ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿ ಹಲ್ಲೆಗೆ ಯತ್ನ ನಡೆಸಿ ತುರ್ತು ಚಿಕಿತ್ಸಾ ಘಟಕದ ಕಿಟಕಿಯ ಗಾಜುಗಳನ್ನು ಹೊಡೆದು ಹಾಕಿ ಔಷಧಿಗಳನ್ನು ನಾಶ ಪಡಿಸಿ ದಾಳಿ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ಅಕ್ರೊಶಕ್ಕೆ ಕಾರಣವಾಗಿದೆ.

ಘಟನೆಯಿಂದ ಭಯಬೀತರಾದ ವೈದ್ಯರು ಹಾಗೂ ಸಿಬ್ಬಂದಿಗಳು ಆತಂಕಕ್ಕೆ ಒಳಗಾಗಿದ್ದರಿಂದ ಆಸ್ಪತ್ರೆಯ ಆವರಣದಲ್ಲಿ ಕೆಲಕಾಲ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಸ್ಥಳಕ್ಕೆ ಬಂದ ಸಿಪಿಐ ಬಿ.ಜಿ.ಮಹೇಶ್ ಪರಿಸ್ಥಿತಿಯನ್ನು ತಿಳಿಗೊಳಿಸಿ ಹೆಚ್ಚಿನ ಭದ್ರತೆ ಕಲ್ಪಿಸಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ವೈದ್ಯರ ಮೇಲಿನ ಹಲ್ಲೆಗೆ ಯತ್ನ ಮತ್ತು ಆಸ್ಪತ್ರೆಯಲ್ಲಿನ ದಾಂಧಲೆಯ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವೈದ್ಯರ ಮೇಲೆ ಹಲ್ಲಗೆ ಖಂಡನೆ:

ಅಸ್ಪತ್ರೆಗೆ ಬಂಧ ಬಾಲಕಿಗೆ ತುರ್ತಾಗಿ ಸ್ಪಂದಿಸಿ,ಏನಾಗಿದೆ ಎಂದು ಪೋಷಕರ ಬಳಿ ಕೇಳುತ್ತಿರುವಾಗಲೇ ಈ ರೀತಿ ಏಕಾಏಕಿ ವೈದಯರ ಮೇಲೆ ಹ್ಲಲೆಗೆ ಪ್ರಯತ್ನ ನಡೆಸಿರುವುದು ಖಂಡನೀಯ, ಮಾನವೀಯತೆಯುಳ್ಳ ವೈದ್ಯರ ಮೇಲೆ ಈ ರೀತಿ ಹಲ್ಲೆ ಮಾಡಿದರೆ ಯಾರು ತಾನೆ ಪ್ರಮಾಣಿಕ ಸೇವೆ ನೀಡಲು ಮುಂದೆ ಬರುತ್ತಾರೆ ಎಂದು ಸಾರ್ವಜನಿಕರು ಹಲ್ಲೆ ನಡೆಸಲು ಪ್ರಯತ್ನ ಹಾಗೂ ಧಾಂಧಲೆ ನಡೆಸಿದ ವ್ಯಕ್ತಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರ ಅಸ್ಥಿ ಅಸ್ಪತ್ರೆ ಅದರ ಗಾಜುಗಳನ್ನು ಹೊಡೆದು ಹಾಕಿರುವುದು ಖಂಡನೀಯ ಕೂಡಲೇ ಪೋಲಿಸರು ದಾಂಧಲೆ ನಡೆಸಿ ಹಲ್ಲೆಗೆ ಪ್ರಯತ್ನಿಸಿದ ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡು ಶಿಕ್ಷೆ ನೀಡಬೇಕೆಂದು ಅಗ್ರಹಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 10 ಮಂದಿ ನಕ್ಸಲರ ಹತ್ಯೆ

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…

15 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

43 mins ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

51 mins ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

1 hour ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

2 hours ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

3 hours ago