ಮಳವಳ್ಳಿ: ಅನಾರೋಗ್ಯದಿಂದ ಅಸ್ವಸ್ಥತಗೊಂಡಿದ್ದ ಬಾಲಕಿಯೊಬ್ಬಳು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಬರುವ ಮುನ್ನವೇ ಸಾವನ್ನಪ್ಪಿದ್ದರಿಂದ ಆಕ್ರೋಶಗೊಂಡ ಬಾಲಕಿಯ ಸಂಬಂಧಿಕರು ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿ ಆಸ್ಪತ್ರೆ ಕಿಟಕಿಯ ಗಾಜು ಹಾಗೂ ಸಲಕರಣೆಗಳನ್ನು ಧ್ವಂಸಗೊಳಿಸಿರುವ ಘಟನೆ ಗುರುವಾರ ನಡೆದಿದೆ.
ಮೂಲತಃ ಕೊಳ್ಳೇಗಾಲ ಪಟ್ಟಣದ ಲೇ.ಜಕಾಉಲ್ಲಾ ಎಂಬುವವರ ಪುತ್ರಿ ೧೭ ವರ್ಷ ಬಾಲಕಿ ಮೃತಪಟ್ಟು ದುರೈವಿಯಾಗಿದ್ದು, ಕೆಲ ದಿನಗಳ ಹಿಂದೆ ಹಲಗೂರಿನ ತನ್ನ ಅಜ್ಜಿ ಮನೆಗೆ ಬಂದಿದ್ದ ಬಾಲಕಿಗೆ ಜ್ವರ ಕಾಣಿಸಿಕೊಂಡಿತ್ತು. ಬಾಲಕಿಗೆ ಬುಧವಾರ ಹಲಗೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.
ತೀವ್ರವಾಗಿ ಅಸ್ವಸ್ಥತಗೊಂಡಿದ್ದ ಬಾಲಕಿಯನ್ನು ಗುರುವಾರ ಬೆಳಿಗ್ಗೆ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಆಸ್ಪತ್ರೆಗೆ ಬರುವ ಮುನ್ನ ಬಾಲಕಿ ಮೃತಪಟ್ಟಿದ್ದಳು ಎನ್ನಲಾಗಿದೆ.
ಬಾಲಕಿಯ ಬಾಯಲ್ಲಿ ನೊರೆ ಬರುತ್ತಿದ್ದನ್ನು ಗಮನಿಸಿದ ಆಸ್ಪತ್ರೆಯ ಕರ್ತವ್ತನಿರತ ಡಾ.ಮುರುಳಿ ಅವರು ಪರೀಕ್ಷೆ ನಡೆಸಿದಾಗ ಆಕೆ ಬರುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರಿಗೆ ತಿಳಿಸಿದ್ದಾರೆ. ಇದರಿಂದ ಕುಪಿತರಾದ ಮೃತ ಯುವತಿಯ ಕೆಲ ಸಂಬಂಧಿಕರು ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿ ಹಲ್ಲೆಗೆ ಯತ್ನ ನಡೆಸಿ ತುರ್ತು ಚಿಕಿತ್ಸಾ ಘಟಕದ ಕಿಟಕಿಯ ಗಾಜುಗಳನ್ನು ಹೊಡೆದು ಹಾಕಿ ಔಷಧಿಗಳನ್ನು ನಾಶ ಪಡಿಸಿ ದಾಳಿ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ಅಕ್ರೊಶಕ್ಕೆ ಕಾರಣವಾಗಿದೆ.
ಘಟನೆಯಿಂದ ಭಯಬೀತರಾದ ವೈದ್ಯರು ಹಾಗೂ ಸಿಬ್ಬಂದಿಗಳು ಆತಂಕಕ್ಕೆ ಒಳಗಾಗಿದ್ದರಿಂದ ಆಸ್ಪತ್ರೆಯ ಆವರಣದಲ್ಲಿ ಕೆಲಕಾಲ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಸ್ಥಳಕ್ಕೆ ಬಂದ ಸಿಪಿಐ ಬಿ.ಜಿ.ಮಹೇಶ್ ಪರಿಸ್ಥಿತಿಯನ್ನು ತಿಳಿಗೊಳಿಸಿ ಹೆಚ್ಚಿನ ಭದ್ರತೆ ಕಲ್ಪಿಸಿದರು.
ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ವೈದ್ಯರ ಮೇಲಿನ ಹಲ್ಲೆಗೆ ಯತ್ನ ಮತ್ತು ಆಸ್ಪತ್ರೆಯಲ್ಲಿನ ದಾಂಧಲೆಯ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವೈದ್ಯರ ಮೇಲೆ ಹಲ್ಲಗೆ ಖಂಡನೆ:
ಅಸ್ಪತ್ರೆಗೆ ಬಂಧ ಬಾಲಕಿಗೆ ತುರ್ತಾಗಿ ಸ್ಪಂದಿಸಿ,ಏನಾಗಿದೆ ಎಂದು ಪೋಷಕರ ಬಳಿ ಕೇಳುತ್ತಿರುವಾಗಲೇ ಈ ರೀತಿ ಏಕಾಏಕಿ ವೈದಯರ ಮೇಲೆ ಹ್ಲಲೆಗೆ ಪ್ರಯತ್ನ ನಡೆಸಿರುವುದು ಖಂಡನೀಯ, ಮಾನವೀಯತೆಯುಳ್ಳ ವೈದ್ಯರ ಮೇಲೆ ಈ ರೀತಿ ಹಲ್ಲೆ ಮಾಡಿದರೆ ಯಾರು ತಾನೆ ಪ್ರಮಾಣಿಕ ಸೇವೆ ನೀಡಲು ಮುಂದೆ ಬರುತ್ತಾರೆ ಎಂದು ಸಾರ್ವಜನಿಕರು ಹಲ್ಲೆ ನಡೆಸಲು ಪ್ರಯತ್ನ ಹಾಗೂ ಧಾಂಧಲೆ ನಡೆಸಿದ ವ್ಯಕ್ತಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರ ಅಸ್ಥಿ ಅಸ್ಪತ್ರೆ ಅದರ ಗಾಜುಗಳನ್ನು ಹೊಡೆದು ಹಾಕಿರುವುದು ಖಂಡನೀಯ ಕೂಡಲೇ ಪೋಲಿಸರು ದಾಂಧಲೆ ನಡೆಸಿ ಹಲ್ಲೆಗೆ ಪ್ರಯತ್ನಿಸಿದ ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡು ಶಿಕ್ಷೆ ನೀಡಬೇಕೆಂದು ಅಗ್ರಹಿಸಿದ್ದಾರೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…