ಮಳವಳ್ಳಿ: ಅನಾರೋಗ್ಯದಿಂದ ಅಸ್ವಸ್ಥತಗೊಂಡಿದ್ದ ಬಾಲಕಿಯೊಬ್ಬಳು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಬರುವ ಮುನ್ನವೇ ಸಾವನ್ನಪ್ಪಿದ್ದರಿಂದ ಆಕ್ರೋಶಗೊಂಡ ಬಾಲಕಿಯ ಸಂಬಂಧಿಕರು ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿ ಆಸ್ಪತ್ರೆ ಕಿಟಕಿಯ ಗಾಜು ಹಾಗೂ ಸಲಕರಣೆಗಳನ್ನು ಧ್ವಂಸಗೊಳಿಸಿರುವ ಘಟನೆ ಗುರುವಾರ ನಡೆದಿದೆ.
ಮೂಲತಃ ಕೊಳ್ಳೇಗಾಲ ಪಟ್ಟಣದ ಲೇ.ಜಕಾಉಲ್ಲಾ ಎಂಬುವವರ ಪುತ್ರಿ ೧೭ ವರ್ಷ ಬಾಲಕಿ ಮೃತಪಟ್ಟು ದುರೈವಿಯಾಗಿದ್ದು, ಕೆಲ ದಿನಗಳ ಹಿಂದೆ ಹಲಗೂರಿನ ತನ್ನ ಅಜ್ಜಿ ಮನೆಗೆ ಬಂದಿದ್ದ ಬಾಲಕಿಗೆ ಜ್ವರ ಕಾಣಿಸಿಕೊಂಡಿತ್ತು. ಬಾಲಕಿಗೆ ಬುಧವಾರ ಹಲಗೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.
ತೀವ್ರವಾಗಿ ಅಸ್ವಸ್ಥತಗೊಂಡಿದ್ದ ಬಾಲಕಿಯನ್ನು ಗುರುವಾರ ಬೆಳಿಗ್ಗೆ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಆಸ್ಪತ್ರೆಗೆ ಬರುವ ಮುನ್ನ ಬಾಲಕಿ ಮೃತಪಟ್ಟಿದ್ದಳು ಎನ್ನಲಾಗಿದೆ.
ಬಾಲಕಿಯ ಬಾಯಲ್ಲಿ ನೊರೆ ಬರುತ್ತಿದ್ದನ್ನು ಗಮನಿಸಿದ ಆಸ್ಪತ್ರೆಯ ಕರ್ತವ್ತನಿರತ ಡಾ.ಮುರುಳಿ ಅವರು ಪರೀಕ್ಷೆ ನಡೆಸಿದಾಗ ಆಕೆ ಬರುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರಿಗೆ ತಿಳಿಸಿದ್ದಾರೆ. ಇದರಿಂದ ಕುಪಿತರಾದ ಮೃತ ಯುವತಿಯ ಕೆಲ ಸಂಬಂಧಿಕರು ವೈದ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸಿ ಹಲ್ಲೆಗೆ ಯತ್ನ ನಡೆಸಿ ತುರ್ತು ಚಿಕಿತ್ಸಾ ಘಟಕದ ಕಿಟಕಿಯ ಗಾಜುಗಳನ್ನು ಹೊಡೆದು ಹಾಕಿ ಔಷಧಿಗಳನ್ನು ನಾಶ ಪಡಿಸಿ ದಾಳಿ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ಅಕ್ರೊಶಕ್ಕೆ ಕಾರಣವಾಗಿದೆ.
ಘಟನೆಯಿಂದ ಭಯಬೀತರಾದ ವೈದ್ಯರು ಹಾಗೂ ಸಿಬ್ಬಂದಿಗಳು ಆತಂಕಕ್ಕೆ ಒಳಗಾಗಿದ್ದರಿಂದ ಆಸ್ಪತ್ರೆಯ ಆವರಣದಲ್ಲಿ ಕೆಲಕಾಲ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಸ್ಥಳಕ್ಕೆ ಬಂದ ಸಿಪಿಐ ಬಿ.ಜಿ.ಮಹೇಶ್ ಪರಿಸ್ಥಿತಿಯನ್ನು ತಿಳಿಗೊಳಿಸಿ ಹೆಚ್ಚಿನ ಭದ್ರತೆ ಕಲ್ಪಿಸಿದರು.
ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ವೈದ್ಯರ ಮೇಲಿನ ಹಲ್ಲೆಗೆ ಯತ್ನ ಮತ್ತು ಆಸ್ಪತ್ರೆಯಲ್ಲಿನ ದಾಂಧಲೆಯ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವೈದ್ಯರ ಮೇಲೆ ಹಲ್ಲಗೆ ಖಂಡನೆ:
ಅಸ್ಪತ್ರೆಗೆ ಬಂಧ ಬಾಲಕಿಗೆ ತುರ್ತಾಗಿ ಸ್ಪಂದಿಸಿ,ಏನಾಗಿದೆ ಎಂದು ಪೋಷಕರ ಬಳಿ ಕೇಳುತ್ತಿರುವಾಗಲೇ ಈ ರೀತಿ ಏಕಾಏಕಿ ವೈದಯರ ಮೇಲೆ ಹ್ಲಲೆಗೆ ಪ್ರಯತ್ನ ನಡೆಸಿರುವುದು ಖಂಡನೀಯ, ಮಾನವೀಯತೆಯುಳ್ಳ ವೈದ್ಯರ ಮೇಲೆ ಈ ರೀತಿ ಹಲ್ಲೆ ಮಾಡಿದರೆ ಯಾರು ತಾನೆ ಪ್ರಮಾಣಿಕ ಸೇವೆ ನೀಡಲು ಮುಂದೆ ಬರುತ್ತಾರೆ ಎಂದು ಸಾರ್ವಜನಿಕರು ಹಲ್ಲೆ ನಡೆಸಲು ಪ್ರಯತ್ನ ಹಾಗೂ ಧಾಂಧಲೆ ನಡೆಸಿದ ವ್ಯಕ್ತಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರ ಅಸ್ಥಿ ಅಸ್ಪತ್ರೆ ಅದರ ಗಾಜುಗಳನ್ನು ಹೊಡೆದು ಹಾಕಿರುವುದು ಖಂಡನೀಯ ಕೂಡಲೇ ಪೋಲಿಸರು ದಾಂಧಲೆ ನಡೆಸಿ ಹಲ್ಲೆಗೆ ಪ್ರಯತ್ನಿಸಿದ ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡು ಶಿಕ್ಷೆ ನೀಡಬೇಕೆಂದು ಅಗ್ರಹಿಸಿದ್ದಾರೆ.
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…