ಮಂಡ್ಯ

ಮೈಕ್ರೋ ಫೈನಾನ್ಸ್ ಕಂಪೆನಿಯಿಂದ ಬಾಲಕಿ ಅಪಹರಣ ಪ್ರಕರಣ : ಆರೋಪಿ ಬಂಧನ

ಮಳವಳ್ಳಿ : ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ 7 ವರ್ಷದ ಬಾಲಕಿಯನ್ನು ಅಪಹರಣ ಮಾಡಿ ತಲೆಮರೆಸಿಕೊಂಡಿದ್ದ ಬಜಾಜ್ ಮೈಕ್ರೋ ಫೈನಾನ್ಸ್ ಕಂಪೆನಿಯ ಸೆಂಟರ್ ಮ್ಯಾನೇಜರ್‌ನನ್ನು ಬೆಳಕವಾಡಿಯ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಲ್ಕರ್ ಪುರ ಗ್ರಾಮದ ಪಿ.ಅಜಿತ್ (37) ಎಂಬವನೇ ಬಂಧಿತ ಆರೋಪಿ.

ತಾಲ್ಲೂಕಿನ ಪೂರಿಗಾಲಿ ಗ್ರಾಮದ ಮಂಗಳಮ್ಮ ಎಂಬವರು ತಮ್ಮ ಪುತ್ರ ನವೀನ್ ಎಂಬವರಿಗೆ ಟಿ. ನರಸೀಪುರ ಬಜಾಜ್ ಪಿನ್ ಸರ್ವ್ ಮೈಕ್ರೋ ಫೈನಾನ್ಸ್ ಕಂಪೆನಿಯಿಂದ 30 ಸಾವಿರ ರೂ. ಸಾಲ ತೆಗೆದುಕೊಟ್ಟಿದ್ದರು. ಪ್ರತಿ ತಿಂಗಳು ಕಂತಿನ ಹಣವನ್ನು ನವೀನ್ ಕಟ್ಟುತ್ತಿದ್ದರು. ಮೇ ತಿಂಗಳ ಕಂತನ್ನು ಕಟ್ಟಿರಲಿಲ್ಲ. ಸಾಲ ವಸೂಲಿಗೆ ಮನೆಗೆ ಬಂದ ಮೈಕ್ರೋ ಫೈನಾನ್ಸ್ ಸೆಂಟರ್ ಮ್ಯಾನೇಜರ್ ಪಿ. ಅಜಿತ್ ಮನೆಯಲ್ಲಿ ಯಾರೂ ಇಲ್ಲದ್ದನ್ನು ಕಂಡು ಪೋಷಕರ ಅನುಮತಿ ಇಲ್ಲದೆ ಬಲವಂತವಾಗಿ ಜೊತೆಯಲ್ಲಿ ಸಾಲ ಪಡೆದವರನ್ನು ತೋರಿಸುವಂತೆ ನವೀನ್ ಅವರ 7 ವರ್ಷದ ಮಗಳನ್ನು ಕರೆದುಕೊಂಡು ಹೋಗಿದ್ದನು.

ಇದನ್ನ ಓದಿದ್ರಾ.. ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳಿಂದ ಬಾಲಕಿ ಕರೆದೊಯ್ದ ಪ್ರಕರಣ: ಎಫ್‌ಐಆರ್‌ ದಾಖಲು – Andolana

ಈ ಸಂಬಂಧವಾಗಿ ಕಳೆದ ಜೂ.20 ರಂದು ಬಸವಶೆಟ್ಟಿ ಎಂಬವರು ಬೆಳಕವಾಡಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಪತ್ತೆಗಾಗಿ ಅಪರ ಪೊಲೀಸ್ ಅಧೀಕ್ಷಕರಾದ ಸಿ.ಇ. ತಿಮ್ಮಯ್ಯ, ಗಂಗಾಧರಸ್ವಾಮಿ, ಮಳವಳ್ಳಿ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕ ವಿ.ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್. ಶ್ರೀಧರ್ ನೇತೃತ್ವದಲ್ಲಿ ಬೆಳಕವಾಡಿ ಪೊಲೀಸ್ ಠಾಣಾ ಪಿಎಸ್‌ಐ ಬಿ.ವಿ. ಪ್ರಕಾಶ್, ಕಿರುಗಾವಲು ಪೊಲೀಸ್ ಠಾಣಾ ಪಿಎಸ್‌ಐ ರವಿಕುಮಾರ್, ಸಿಬ್ಬಂದಿಗಳಾದ ನಾಗೇಂದ್ರ, ರಿಯಾಜ್ ಪಾಷ, ನಿಂಗರಾಜು, ರವಿಕಿರಣ್, ಲೋಕೇಶ್ ಮತ್ತು ಸಿ.ಪಿ.ಸಿ ಯವರಾದ ಸಿದ್ದರಾಜು, ಶಿವಕುಮಾರ್, ಸುಜನ್ ಮನೋಹರ್ ಶರ್ಮ, ಮಹೇಶ, ಅನಿನಾಶ್, ಮಧುಕಿರಣ್, ಮಲ್ಲಿಕಾರ್ಜುನ ಚುಳುಕಿ ಅವರ ತಂಡ ರಚಿಸಲಾಗಿತ್ತು.

ಸದರಿ ತಂಡವು ಜೂ.20 ರಂದು ಆರೋಪಿ ಪಿ.ಅಜಿತ್‌ನನ್ನು ತಮಿಳುನಾಡಿನ ಬಣ್ಣಾರಿ ಅಮ್ಮ ದೇವಸ್ಥಾನದ ಬಳಿ ಪತ್ತೆ ಮಾಡಿ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಅಭಿನಂದಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮದ್ದೂರು| ಚಿಕ್ಕದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.…

38 mins ago

ನಂದಿನಿ ಉತ್ಪನ್ನಗಳ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್‌

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ.…

55 mins ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…

1 hour ago

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

1 hour ago

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…

1 hour ago

ಕುಶಾಲನಗರ| ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್‌ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು,…

1 hour ago