ಮಂಡ್ಯ

ಮೈಕ್ರೋ ಫೈನಾನ್ಸ್ ಕಂಪೆನಿಯಿಂದ ಬಾಲಕಿ ಅಪಹರಣ ಪ್ರಕರಣ : ಆರೋಪಿ ಬಂಧನ

ಮಳವಳ್ಳಿ : ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ 7 ವರ್ಷದ ಬಾಲಕಿಯನ್ನು ಅಪಹರಣ ಮಾಡಿ ತಲೆಮರೆಸಿಕೊಂಡಿದ್ದ ಬಜಾಜ್ ಮೈಕ್ರೋ ಫೈನಾನ್ಸ್ ಕಂಪೆನಿಯ ಸೆಂಟರ್ ಮ್ಯಾನೇಜರ್‌ನನ್ನು ಬೆಳಕವಾಡಿಯ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಲ್ಕರ್ ಪುರ ಗ್ರಾಮದ ಪಿ.ಅಜಿತ್ (37) ಎಂಬವನೇ ಬಂಧಿತ ಆರೋಪಿ.

ತಾಲ್ಲೂಕಿನ ಪೂರಿಗಾಲಿ ಗ್ರಾಮದ ಮಂಗಳಮ್ಮ ಎಂಬವರು ತಮ್ಮ ಪುತ್ರ ನವೀನ್ ಎಂಬವರಿಗೆ ಟಿ. ನರಸೀಪುರ ಬಜಾಜ್ ಪಿನ್ ಸರ್ವ್ ಮೈಕ್ರೋ ಫೈನಾನ್ಸ್ ಕಂಪೆನಿಯಿಂದ 30 ಸಾವಿರ ರೂ. ಸಾಲ ತೆಗೆದುಕೊಟ್ಟಿದ್ದರು. ಪ್ರತಿ ತಿಂಗಳು ಕಂತಿನ ಹಣವನ್ನು ನವೀನ್ ಕಟ್ಟುತ್ತಿದ್ದರು. ಮೇ ತಿಂಗಳ ಕಂತನ್ನು ಕಟ್ಟಿರಲಿಲ್ಲ. ಸಾಲ ವಸೂಲಿಗೆ ಮನೆಗೆ ಬಂದ ಮೈಕ್ರೋ ಫೈನಾನ್ಸ್ ಸೆಂಟರ್ ಮ್ಯಾನೇಜರ್ ಪಿ. ಅಜಿತ್ ಮನೆಯಲ್ಲಿ ಯಾರೂ ಇಲ್ಲದ್ದನ್ನು ಕಂಡು ಪೋಷಕರ ಅನುಮತಿ ಇಲ್ಲದೆ ಬಲವಂತವಾಗಿ ಜೊತೆಯಲ್ಲಿ ಸಾಲ ಪಡೆದವರನ್ನು ತೋರಿಸುವಂತೆ ನವೀನ್ ಅವರ 7 ವರ್ಷದ ಮಗಳನ್ನು ಕರೆದುಕೊಂಡು ಹೋಗಿದ್ದನು.

ಇದನ್ನ ಓದಿದ್ರಾ.. ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳಿಂದ ಬಾಲಕಿ ಕರೆದೊಯ್ದ ಪ್ರಕರಣ: ಎಫ್‌ಐಆರ್‌ ದಾಖಲು – Andolana

ಈ ಸಂಬಂಧವಾಗಿ ಕಳೆದ ಜೂ.20 ರಂದು ಬಸವಶೆಟ್ಟಿ ಎಂಬವರು ಬೆಳಕವಾಡಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಪತ್ತೆಗಾಗಿ ಅಪರ ಪೊಲೀಸ್ ಅಧೀಕ್ಷಕರಾದ ಸಿ.ಇ. ತಿಮ್ಮಯ್ಯ, ಗಂಗಾಧರಸ್ವಾಮಿ, ಮಳವಳ್ಳಿ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕ ವಿ.ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್. ಶ್ರೀಧರ್ ನೇತೃತ್ವದಲ್ಲಿ ಬೆಳಕವಾಡಿ ಪೊಲೀಸ್ ಠಾಣಾ ಪಿಎಸ್‌ಐ ಬಿ.ವಿ. ಪ್ರಕಾಶ್, ಕಿರುಗಾವಲು ಪೊಲೀಸ್ ಠಾಣಾ ಪಿಎಸ್‌ಐ ರವಿಕುಮಾರ್, ಸಿಬ್ಬಂದಿಗಳಾದ ನಾಗೇಂದ್ರ, ರಿಯಾಜ್ ಪಾಷ, ನಿಂಗರಾಜು, ರವಿಕಿರಣ್, ಲೋಕೇಶ್ ಮತ್ತು ಸಿ.ಪಿ.ಸಿ ಯವರಾದ ಸಿದ್ದರಾಜು, ಶಿವಕುಮಾರ್, ಸುಜನ್ ಮನೋಹರ್ ಶರ್ಮ, ಮಹೇಶ, ಅನಿನಾಶ್, ಮಧುಕಿರಣ್, ಮಲ್ಲಿಕಾರ್ಜುನ ಚುಳುಕಿ ಅವರ ತಂಡ ರಚಿಸಲಾಗಿತ್ತು.

ಸದರಿ ತಂಡವು ಜೂ.20 ರಂದು ಆರೋಪಿ ಪಿ.ಅಜಿತ್‌ನನ್ನು ತಮಿಳುನಾಡಿನ ಬಣ್ಣಾರಿ ಅಮ್ಮ ದೇವಸ್ಥಾನದ ಬಳಿ ಪತ್ತೆ ಮಾಡಿ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಅಭಿನಂದಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

8 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

8 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

9 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

9 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

10 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

10 hours ago