ಮಂಡ್ಯ

ಮೈಕ್ರೋ ಫೈನಾನ್ಸ್ ಕಂಪೆನಿಯಿಂದ ಬಾಲಕಿ ಅಪಹರಣ ಪ್ರಕರಣ : ಆರೋಪಿ ಬಂಧನ

ಮಳವಳ್ಳಿ : ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ 7 ವರ್ಷದ ಬಾಲಕಿಯನ್ನು ಅಪಹರಣ ಮಾಡಿ ತಲೆಮರೆಸಿಕೊಂಡಿದ್ದ ಬಜಾಜ್ ಮೈಕ್ರೋ ಫೈನಾನ್ಸ್ ಕಂಪೆನಿಯ ಸೆಂಟರ್ ಮ್ಯಾನೇಜರ್‌ನನ್ನು ಬೆಳಕವಾಡಿಯ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಲ್ಕರ್ ಪುರ ಗ್ರಾಮದ ಪಿ.ಅಜಿತ್ (37) ಎಂಬವನೇ ಬಂಧಿತ ಆರೋಪಿ.

ತಾಲ್ಲೂಕಿನ ಪೂರಿಗಾಲಿ ಗ್ರಾಮದ ಮಂಗಳಮ್ಮ ಎಂಬವರು ತಮ್ಮ ಪುತ್ರ ನವೀನ್ ಎಂಬವರಿಗೆ ಟಿ. ನರಸೀಪುರ ಬಜಾಜ್ ಪಿನ್ ಸರ್ವ್ ಮೈಕ್ರೋ ಫೈನಾನ್ಸ್ ಕಂಪೆನಿಯಿಂದ 30 ಸಾವಿರ ರೂ. ಸಾಲ ತೆಗೆದುಕೊಟ್ಟಿದ್ದರು. ಪ್ರತಿ ತಿಂಗಳು ಕಂತಿನ ಹಣವನ್ನು ನವೀನ್ ಕಟ್ಟುತ್ತಿದ್ದರು. ಮೇ ತಿಂಗಳ ಕಂತನ್ನು ಕಟ್ಟಿರಲಿಲ್ಲ. ಸಾಲ ವಸೂಲಿಗೆ ಮನೆಗೆ ಬಂದ ಮೈಕ್ರೋ ಫೈನಾನ್ಸ್ ಸೆಂಟರ್ ಮ್ಯಾನೇಜರ್ ಪಿ. ಅಜಿತ್ ಮನೆಯಲ್ಲಿ ಯಾರೂ ಇಲ್ಲದ್ದನ್ನು ಕಂಡು ಪೋಷಕರ ಅನುಮತಿ ಇಲ್ಲದೆ ಬಲವಂತವಾಗಿ ಜೊತೆಯಲ್ಲಿ ಸಾಲ ಪಡೆದವರನ್ನು ತೋರಿಸುವಂತೆ ನವೀನ್ ಅವರ 7 ವರ್ಷದ ಮಗಳನ್ನು ಕರೆದುಕೊಂಡು ಹೋಗಿದ್ದನು.

ಇದನ್ನ ಓದಿದ್ರಾ.. ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳಿಂದ ಬಾಲಕಿ ಕರೆದೊಯ್ದ ಪ್ರಕರಣ: ಎಫ್‌ಐಆರ್‌ ದಾಖಲು – Andolana

ಈ ಸಂಬಂಧವಾಗಿ ಕಳೆದ ಜೂ.20 ರಂದು ಬಸವಶೆಟ್ಟಿ ಎಂಬವರು ಬೆಳಕವಾಡಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಪತ್ತೆಗಾಗಿ ಅಪರ ಪೊಲೀಸ್ ಅಧೀಕ್ಷಕರಾದ ಸಿ.ಇ. ತಿಮ್ಮಯ್ಯ, ಗಂಗಾಧರಸ್ವಾಮಿ, ಮಳವಳ್ಳಿ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕ ವಿ.ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್. ಶ್ರೀಧರ್ ನೇತೃತ್ವದಲ್ಲಿ ಬೆಳಕವಾಡಿ ಪೊಲೀಸ್ ಠಾಣಾ ಪಿಎಸ್‌ಐ ಬಿ.ವಿ. ಪ್ರಕಾಶ್, ಕಿರುಗಾವಲು ಪೊಲೀಸ್ ಠಾಣಾ ಪಿಎಸ್‌ಐ ರವಿಕುಮಾರ್, ಸಿಬ್ಬಂದಿಗಳಾದ ನಾಗೇಂದ್ರ, ರಿಯಾಜ್ ಪಾಷ, ನಿಂಗರಾಜು, ರವಿಕಿರಣ್, ಲೋಕೇಶ್ ಮತ್ತು ಸಿ.ಪಿ.ಸಿ ಯವರಾದ ಸಿದ್ದರಾಜು, ಶಿವಕುಮಾರ್, ಸುಜನ್ ಮನೋಹರ್ ಶರ್ಮ, ಮಹೇಶ, ಅನಿನಾಶ್, ಮಧುಕಿರಣ್, ಮಲ್ಲಿಕಾರ್ಜುನ ಚುಳುಕಿ ಅವರ ತಂಡ ರಚಿಸಲಾಗಿತ್ತು.

ಸದರಿ ತಂಡವು ಜೂ.20 ರಂದು ಆರೋಪಿ ಪಿ.ಅಜಿತ್‌ನನ್ನು ತಮಿಳುನಾಡಿನ ಬಣ್ಣಾರಿ ಅಮ್ಮ ದೇವಸ್ಥಾನದ ಬಳಿ ಪತ್ತೆ ಮಾಡಿ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಅಭಿನಂದಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

1 hour ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

3 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

6 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

6 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

11 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

11 hours ago