ಮಂಡ್ಯ

ಮೈಕ್ರೋ ಫೈನಾನ್ಸ್ ಕಂಪೆನಿಯಿಂದ ಬಾಲಕಿ ಅಪಹರಣ ಪ್ರಕರಣ : ಆರೋಪಿ ಬಂಧನ

ಮಳವಳ್ಳಿ : ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ 7 ವರ್ಷದ ಬಾಲಕಿಯನ್ನು ಅಪಹರಣ ಮಾಡಿ ತಲೆಮರೆಸಿಕೊಂಡಿದ್ದ ಬಜಾಜ್ ಮೈಕ್ರೋ ಫೈನಾನ್ಸ್ ಕಂಪೆನಿಯ ಸೆಂಟರ್ ಮ್ಯಾನೇಜರ್‌ನನ್ನು ಬೆಳಕವಾಡಿಯ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಲ್ಕರ್ ಪುರ ಗ್ರಾಮದ ಪಿ.ಅಜಿತ್ (37) ಎಂಬವನೇ ಬಂಧಿತ ಆರೋಪಿ.

ತಾಲ್ಲೂಕಿನ ಪೂರಿಗಾಲಿ ಗ್ರಾಮದ ಮಂಗಳಮ್ಮ ಎಂಬವರು ತಮ್ಮ ಪುತ್ರ ನವೀನ್ ಎಂಬವರಿಗೆ ಟಿ. ನರಸೀಪುರ ಬಜಾಜ್ ಪಿನ್ ಸರ್ವ್ ಮೈಕ್ರೋ ಫೈನಾನ್ಸ್ ಕಂಪೆನಿಯಿಂದ 30 ಸಾವಿರ ರೂ. ಸಾಲ ತೆಗೆದುಕೊಟ್ಟಿದ್ದರು. ಪ್ರತಿ ತಿಂಗಳು ಕಂತಿನ ಹಣವನ್ನು ನವೀನ್ ಕಟ್ಟುತ್ತಿದ್ದರು. ಮೇ ತಿಂಗಳ ಕಂತನ್ನು ಕಟ್ಟಿರಲಿಲ್ಲ. ಸಾಲ ವಸೂಲಿಗೆ ಮನೆಗೆ ಬಂದ ಮೈಕ್ರೋ ಫೈನಾನ್ಸ್ ಸೆಂಟರ್ ಮ್ಯಾನೇಜರ್ ಪಿ. ಅಜಿತ್ ಮನೆಯಲ್ಲಿ ಯಾರೂ ಇಲ್ಲದ್ದನ್ನು ಕಂಡು ಪೋಷಕರ ಅನುಮತಿ ಇಲ್ಲದೆ ಬಲವಂತವಾಗಿ ಜೊತೆಯಲ್ಲಿ ಸಾಲ ಪಡೆದವರನ್ನು ತೋರಿಸುವಂತೆ ನವೀನ್ ಅವರ 7 ವರ್ಷದ ಮಗಳನ್ನು ಕರೆದುಕೊಂಡು ಹೋಗಿದ್ದನು.

ಇದನ್ನ ಓದಿದ್ರಾ.. ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳಿಂದ ಬಾಲಕಿ ಕರೆದೊಯ್ದ ಪ್ರಕರಣ: ಎಫ್‌ಐಆರ್‌ ದಾಖಲು – Andolana

ಈ ಸಂಬಂಧವಾಗಿ ಕಳೆದ ಜೂ.20 ರಂದು ಬಸವಶೆಟ್ಟಿ ಎಂಬವರು ಬೆಳಕವಾಡಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಪತ್ತೆಗಾಗಿ ಅಪರ ಪೊಲೀಸ್ ಅಧೀಕ್ಷಕರಾದ ಸಿ.ಇ. ತಿಮ್ಮಯ್ಯ, ಗಂಗಾಧರಸ್ವಾಮಿ, ಮಳವಳ್ಳಿ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕ ವಿ.ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್. ಶ್ರೀಧರ್ ನೇತೃತ್ವದಲ್ಲಿ ಬೆಳಕವಾಡಿ ಪೊಲೀಸ್ ಠಾಣಾ ಪಿಎಸ್‌ಐ ಬಿ.ವಿ. ಪ್ರಕಾಶ್, ಕಿರುಗಾವಲು ಪೊಲೀಸ್ ಠಾಣಾ ಪಿಎಸ್‌ಐ ರವಿಕುಮಾರ್, ಸಿಬ್ಬಂದಿಗಳಾದ ನಾಗೇಂದ್ರ, ರಿಯಾಜ್ ಪಾಷ, ನಿಂಗರಾಜು, ರವಿಕಿರಣ್, ಲೋಕೇಶ್ ಮತ್ತು ಸಿ.ಪಿ.ಸಿ ಯವರಾದ ಸಿದ್ದರಾಜು, ಶಿವಕುಮಾರ್, ಸುಜನ್ ಮನೋಹರ್ ಶರ್ಮ, ಮಹೇಶ, ಅನಿನಾಶ್, ಮಧುಕಿರಣ್, ಮಲ್ಲಿಕಾರ್ಜುನ ಚುಳುಕಿ ಅವರ ತಂಡ ರಚಿಸಲಾಗಿತ್ತು.

ಸದರಿ ತಂಡವು ಜೂ.20 ರಂದು ಆರೋಪಿ ಪಿ.ಅಜಿತ್‌ನನ್ನು ತಮಿಳುನಾಡಿನ ಬಣ್ಣಾರಿ ಅಮ್ಮ ದೇವಸ್ಥಾನದ ಬಳಿ ಪತ್ತೆ ಮಾಡಿ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಅಭಿನಂದಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago