Girls death case at MIMS
ಮಂಡ್ಯ: ಮಳವಳ್ಳಿ ತಾಲ್ಲೂಕಿನ ನೆಲ್ಲೂರು ಗ್ರಾಮದ ರೈತ ನಿಂಗರಾಜು-ರಂಜಿತಾ ದಂಪತಿಯ ಪುತ್ರಿ ಸಾನ್ವಿ (7) ಸಾವಿಗೆ ಮಿಮ್ಸ್ ವೈದ್ಯರ ನಿರ್ಲಕ್ಷ ಕಾರಣ ಎಂಬ ಗುರುತರ ಆರೋಪ ಬಂದಿರುವುದರಿಂದ ಈ ಪ್ರಕರಣವನ್ನು ಮೈಸೂರು ವೈದ್ಯಕೀಯ ಕಾಲೇಜಿನ ಸೂಪರಿಂಟೆಂಡೆಂಟ್ ಅವರ ನೇತೃತ್ವದಲ್ಲಿ ತನಿಖೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.
ಬಾಲಕಿಯ ಸಾವಿಗೆ ಸಂಬಂಧಿಸಿದಂತೆ ಮಿಮ್ಸ್ನ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅವರ ನೇತೃತ್ವದಲ್ಲಿ ಸಭೆ ನಡೆಸಿದ ಶಾಸಕರು, ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಸತ್ಯಾಸತ್ಯತೆಯನ್ನು ಪರಿಶೀಲಿಸುವ ಸಲುವಾಗಿ ತಜ್ಞರ ಸಮಿತಿಯನ್ನು ರಚಿಸಿ ಆದೇಶಿಸಿದೆ ಎಂದರು.
ಮಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿ ಸಾವಿಗೀಡಾಗಿರುವುದು ನೋವಿನ ಸಂಗತಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು ನಮ್ಮದು ತಪ್ಪಿಲ್ಲ ಎಂದು ಹೇಳಿದರೆ, ಮೃತ ಬಾಲಕಿಯ ಪೋಷಕರು ವೈದ್ಯರ ನಿರ್ಲಕ್ಷ ದಿಂದಲೇ ನಮ್ಮ ಮಗಳು ಮೃತಪಟ್ಟಿದ್ದಾಳೆ ಎಂದು ಆರೋಪ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ವೈದ್ಯಕೀಯ ಕಾಲೇಜಿನ ಮಕ್ಕಳ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರದೀಪ್ ಅವರ ನೇತೃತ್ವದಲ್ಲಿ ತನಿಖೆ ನಡೆಸಲು ನಿರ್ಧರಿಸಲಾಗಿದೆ ಎಂದರು.
ಈ ತಂಡದಲ್ಲಿ ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರದಲ್ಲಿರುವ ಮೂಳೆ ಮತ್ತು ಕೀಲು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಮಹೇಶ್, ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಬಾಲಕೃಷ್ಣ, ಅರಿವಳಿಕೆ ವಿಭಾಗದ ಮುಖ್ಯಸ್ಥ ಡಾ.ಚೇತನಾನಂದ ಅವರು ಸದಸ್ಯರಾಗಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಸೋಮಶೇಖರ್ ಅವರು ಸದಸ್ಯ ಕಾರ್ಯದರ್ಶಿಗಳಾಗಿ ಸಮಿತಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವಿವರಿಸಿದರು.
ಸಮಿತಿಯು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೂಡಲೇ ತನಿಖೆ ನಡೆಸಿ ತನಿಖಾ ವರದಿಯನ್ನು 15 ದಿನದೊಳಗಾಗಿ ತಪ್ಪದೇ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಲಾಗಿದೆ ಎಂದರು.
ಘಟನೆ ಸಂಬಂಧ ಮಿಮ್ಸ್ ವೈದ್ಯರಿಂದ ಮಾಹಿತಿ ಕಲೆ ಹಾಕಲಾಗಿದ್ದು, ಮಗುವಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿರಬಹುದೆಂಬ ಹೇಳಿಕೆ ಸರಿಯಲ್ಲ, ಮಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಉಡಾಫೆ ವರ್ತನೆ ಬಗ್ಗೆ ಸಾರ್ವಜನಿಕ ದೂರುಗಳನ್ನು ಆಲಿಸಿ, ಆ ಬಗ್ಗೆಯೂ ಚರ್ಚಿಸಲಾಗಿದೆ. ಸ್ಥಾನಿಕ ವೈದ್ಯಾಧಿಕಾರಿ ಡಾ.ದರ್ಶನ್ ಅವರ ವರ್ತನೆ ಬಗ್ಗೆಯೂ ಚರ್ಚಿಸಿ ಎಚ್ಚರಿಕೆ ನೀಡಲಾಗಿದೆ ಎಂದರು.
ಮಹಾದೇಶ್ ಎಂ ಗೌಡ ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ…
ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು…
ಮೈಸೂರು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯ ಮಣಿಪಾಲ್ ಜಂಕ್ಷನ್ ಫ್ಲೈಓವರ್…
ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್…
ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…