ಮಂಡ್ಯ

ಯುವ ರೈತರ ಮದುವೆಯಾಗುವ ಯುವತಿಯರಿಗೆ 5 ಲಕ್ಷ ನೀಡಲಿ ; ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗೆ ಮನವಿ

ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ರೈತರ ಮಕ್ಕಳು, ಒಂದು ಕಡೆ ನಿರುದ್ಯೋಗ ಸಮಸ್ಯೆ, ರಾಜ್ಯ ಸರ್ಕಾರದಿಂದ ಯಾವುದೇ ಸರ್ಕಾರಿ ಕೆಲಸಕ್ಕೆ ನೇಮಕಾತಿಯಾಗಿಲ್ಲ. ಸರ್ಕಾರದ ನೀತಿಯಿಂದಾಗಿ ಖಾಸಗಿ ಕಂಪನಿಗಳು ಕರ್ನಾಟಕಕ್ಕೆ ಉದ್ಯಮ ಸ್ಥಾಪನೆಗಾಗಿ ಬರುತ್ತಿಲ್ಲ. ರೈತತರ ಬೆಳೆಗಳಿಗೆ ಬೆಂಬಲ ಬೆಲೆ ಇಲ್ಲ, ಇತ್ತ ಬೆಳೆ ಬೆಳೆಯಲು ನೀರು ಇಲ್ಲ. ಕೃಷಿಯನ್ನು ನಂಬಿಕೊಂಡವರ ಬದುಕು ಮೂರಾಬಟ್ಟೆಯಾಗಿದೆ ಎಂದು ದೂರಿದರು.

ಇತ್ತ ಕೃಷಿಯನ್ನೇ ನಂಬಿಕೊಂಡು ಬದುಕು ಕಟ್ಟಿಕೊಳ್ಳಬೇಕೆಂದಿರುವ ಯುವ ರೈತರಿಗೆ ಹೆಣ್ಣು ಸಿಗುತ್ತಿಲ್ಲ. ಇದರಿಂದ ಯುವ ರೈತರಿಗೆ ಬದುಕಿನ ಗ್ಯಾರಂಟಿ ಇಲ್ಲವಾಗಿದೆ. ಹಾಗಾಗಿ ಸರ್ಕಾರ ಶಾದಿ ಭಾಗ್ಯದ ಮಾದರಿಯಲ್ಲಿ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ೫ ಲಕ್ಷ ರೂ.ಗಳ ಪ್ರೋತ್ಸಾಹ ಧನವನ್ನು ನೀಡುವ ಮೂಲಕ ರೈತ ಮಕ್ಕಳನ್ನು ಮದುವೆಯನ್ನು ಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿ: ಕಾಲುಜಾರಿ ನೀರಿನಲ್ಲಿ ಮುಳುಗಿ ಯುವಕ ಸಾವು

ಮದುವೆಯಾಗುವ ಯುವಕ-ಯುವತಿಯರಿಗೆ ಸರ್ಕಾರದ ವತಿಯಿಂದ ಸರಳ ಸಾಮೂಹಿಕ ವಿವಾಹ ಮಾಡಿಕೊಡುವ ವ್ಯವಸ್ಥೆ ಮಾಡಿಕೊಡುವ ಮೂಲಕ ಯುವ ರೈತರ ಬದುಕಿಗೆ ಗ್ಯಾರಂಟಿ ನೀಡಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ, ಉತ್ತರ ಕರ್ನಾಟಕ, ಹಳೆಮೈಸೂರು ಭಾಗ ಎನ್ನುವ ತಾರತಮ್ಯವಿಲ್ಲದೆ ಅಖಂಡ ಕರ್ನಾಟಕಕ್ಕೆ ಈ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ರೈತ ಮಕ್ಕಳಾದ ಆನಂದ, ಗೊರವಾಲೆ ಶಿವಣ್ಣ, ಮುಖಂಡರಾದ ಸಿ.ಟಿ. ಮಂಜುನಾಥ್, ಹೊಸಹಳ್ಳಿ ಶಿವು, ಜಯರಾಮು, ಬಿ.ಟಿ. ಶಿವಲಿಂಗಯ್ಯ, ವೈರಮುಡಿ, ಸಾಗರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

1 hour ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

2 hours ago

ಓದುಗರ ಪತ್ರ: ಚುನಾವಣೋತ್ತರ.. !

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…

3 hours ago

ಓದುಗರ ಪತ್ರ: ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…

3 hours ago

ಓದುಗರ ಪತ್ರ: ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರುಣಿಸಿ

ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…

3 hours ago

ಓದುಗರ ಪತ್ರ: ವಾಣಿಜ್ಯ ಸಿಲಿಂಡರ್ ದರ ಏರಿಕೆ ಬರೆ

ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್‌ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್‌ಗಳಲ್ಲಿ…

3 hours ago