ಮಂಡ್ಯ

ಅರುಂಧತಿಯಾರ್ ಜಾತಿಗೆ ಪ್ರತ್ಯೇಕ ಮೀಸಲಾತಿ ನೀಡಿ: ಬಾಬು ಆಗ್ರಹ

ಮಂಡ್ಯ: ತಮಿಳುನಾಡಿನಲ್ಲಿ ಅರುಂಧತಿಯಾರ್‌ ಸಮುದಾಯಕ್ಕೆ ಶೇ 3ರಷ್ಟು ಮೀಸಲಾತಿ ನೀಡುತ್ತಿದ್ದು, ರಾಜ್ಯದಲ್ಲಿಯೂ ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಕರ್ನಾಟಕ ಅರುಂಧತಿಯಾರ್‌ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿ, ಮ್ಯಾನುಯಲ್ ಸ್ಕ್ಯಾವೆಂಜರ್ ಸೇರಿದಂತೆ ಸ್ವಚ್ಛತಾ ಕಾರ್ಯಗಳಲ್ಲಿ ತೊಡಗಿದವರನ್ನು ಆದಿ ದ್ರಾವಿಡ, ಆದಿ ಆಂಧ್ರ, ಆದಿ ಕರ್ನಾಟಕ ಜಾತಿ ಧೃಢೀಕರಣದಲ್ಲಿದ್ದು, ತಮಿಳುನಾಡಿನಲ್ಲಿ ಹಲವು ಸಂಶೋಧನೆ ಮೂಲಕ ನಮ್ಮ ಜಾತಿಯನ್ನು ಅರುಂಧತಿಯಾರ್ ಎಂದು ಗುರುತಿಸಲಾಗಿದೆ.

ಮಾದಿಗ ಜಾತಿಯಲ್ಲಿ ಎಡ, ಬಲಗಳಿದ್ದು, ಎಡ ಭಾಗದಲ್ಲಿ ಅರುಂಧತಿಯಾರ್ ಜಾತಿಯು ಬರಲಿದೆ. ಮಾದಿಗ ಜಾತಿಗೆ ಪ್ರತ್ಯೇಕ ಮೀಸಲಾತಿ ದೊರೆಯಲಿದ್ದು, ಅವರ ನಡುವೆ ಅರುಂಧತಿಯಾರ್ ಸಮುದಾಯವು ಶೈಕ್ಷಣಿಕ, ಸಮಾಜಿಕ, ಆರ್ಥಿಕ ಸಮಾನತೆಯನ್ನು ಪಡೆಯಬೇಕಾಗಿದ್ದು, ತಮಿಳುನಾಡಿನಲ್ಲಿ ಶೇ 3ರಷ್ಟು ಮೀಸಲಾತಿ ಅರುಂಧತಿಯಾರ್ ಸಮುದಾಯಕ್ಕೆ ನೀಡುತ್ತಿದ್ದು, ರಾಜ್ಯದಲ್ಲಿಯೂ ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ಜಾತಿ ಮೀಸಲಾತಿ ಸಂಬಂಧ ನ್ಯಾ.ನಾಗಮೋಹನ್‌ದಾಸ್ ಅವರು ವರದಿ ಸಲ್ಲಿಸಿದ್ದು, ಸರ್ಕಾರದಿಂದ ವರದಿಯ ವೈಜ್ಞಾನಿಕ ಸಮೀಕ್ಷೆ ನಡೆಯುತ್ತಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಸಮಾಜದ ಬಂಧುಗಳು ಸಮೀಕ್ಷೆಯಲ್ಲಿ ಜಾತಿಯನ್ನು ಅರುಂಧತಿಯಾರ್ ಎಂದು ನಮೂದಿಸಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷೆ ನಾಗಮಣಿ.ಕೆ, ರೇಖಾ, ವಿಜಯ್, ಚಿನ್ನರಾಜು, ಬಿ.ರಾಜು ಇದ್ದರು.

ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

6 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

8 hours ago