ಮಂಡ್ಯ: ತಮಿಳುನಾಡಿನಲ್ಲಿ ಅರುಂಧತಿಯಾರ್ ಸಮುದಾಯಕ್ಕೆ ಶೇ 3ರಷ್ಟು ಮೀಸಲಾತಿ ನೀಡುತ್ತಿದ್ದು, ರಾಜ್ಯದಲ್ಲಿಯೂ ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಕರ್ನಾಟಕ ಅರುಂಧತಿಯಾರ್ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿ, ಮ್ಯಾನುಯಲ್ ಸ್ಕ್ಯಾವೆಂಜರ್ ಸೇರಿದಂತೆ ಸ್ವಚ್ಛತಾ ಕಾರ್ಯಗಳಲ್ಲಿ ತೊಡಗಿದವರನ್ನು ಆದಿ ದ್ರಾವಿಡ, ಆದಿ ಆಂಧ್ರ, ಆದಿ ಕರ್ನಾಟಕ ಜಾತಿ ಧೃಢೀಕರಣದಲ್ಲಿದ್ದು, ತಮಿಳುನಾಡಿನಲ್ಲಿ ಹಲವು ಸಂಶೋಧನೆ ಮೂಲಕ ನಮ್ಮ ಜಾತಿಯನ್ನು ಅರುಂಧತಿಯಾರ್ ಎಂದು ಗುರುತಿಸಲಾಗಿದೆ.
ಮಾದಿಗ ಜಾತಿಯಲ್ಲಿ ಎಡ, ಬಲಗಳಿದ್ದು, ಎಡ ಭಾಗದಲ್ಲಿ ಅರುಂಧತಿಯಾರ್ ಜಾತಿಯು ಬರಲಿದೆ. ಮಾದಿಗ ಜಾತಿಗೆ ಪ್ರತ್ಯೇಕ ಮೀಸಲಾತಿ ದೊರೆಯಲಿದ್ದು, ಅವರ ನಡುವೆ ಅರುಂಧತಿಯಾರ್ ಸಮುದಾಯವು ಶೈಕ್ಷಣಿಕ, ಸಮಾಜಿಕ, ಆರ್ಥಿಕ ಸಮಾನತೆಯನ್ನು ಪಡೆಯಬೇಕಾಗಿದ್ದು, ತಮಿಳುನಾಡಿನಲ್ಲಿ ಶೇ 3ರಷ್ಟು ಮೀಸಲಾತಿ ಅರುಂಧತಿಯಾರ್ ಸಮುದಾಯಕ್ಕೆ ನೀಡುತ್ತಿದ್ದು, ರಾಜ್ಯದಲ್ಲಿಯೂ ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.
ಜಾತಿ ಮೀಸಲಾತಿ ಸಂಬಂಧ ನ್ಯಾ.ನಾಗಮೋಹನ್ದಾಸ್ ಅವರು ವರದಿ ಸಲ್ಲಿಸಿದ್ದು, ಸರ್ಕಾರದಿಂದ ವರದಿಯ ವೈಜ್ಞಾನಿಕ ಸಮೀಕ್ಷೆ ನಡೆಯುತ್ತಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಸಮಾಜದ ಬಂಧುಗಳು ಸಮೀಕ್ಷೆಯಲ್ಲಿ ಜಾತಿಯನ್ನು ಅರುಂಧತಿಯಾರ್ ಎಂದು ನಮೂದಿಸಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷೆ ನಾಗಮಣಿ.ಕೆ, ರೇಖಾ, ವಿಜಯ್, ಚಿನ್ನರಾಜು, ಬಿ.ರಾಜು ಇದ್ದರು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…