ಮಂಡ್ಯ

ಗೋ ಬ್ಯಾಕ್‌ ಗವರ್ನರ್‌ ಅನ್ನೋದು ರಾಜಕೀಯ ನಾಟಕ : ಎಚ್‌.ಡಿ.ಕುಮಾರಸ್ವಾಮಿ ಆರೋಪ

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ತಾಲ್ಲೂಕಿನ ಶಿವಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಶ್ರೀ ಮಾರಮ್ಮ ದೇವಿ ದೇವಾಲಯ ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ರಾಜ್ಯಪಾಲರುಗಳ ವಿಷಯದಲ್ಲಿ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಒಮ್ಮೆ ನೆನಪು ಮಾಡಿಕೊಂಡರೆ ಅವರ ಬಣ್ಣ ಏನೆಂದು ಗೊತ್ತಾಗುತ್ತದೆ. ವಿಶೇಷ ಅಧಿವೇಶನ ಕರೆದು ಅಲ್ಲಿ ಸಮಯ ಪೋಲು ಮಾಡುತ್ತಿದ್ದಾರೆ. ರಾಜ್ಯಪಾಲರು ಭಾಷಣ ಓದದಿರುವ ಅಥವಾ ಮೊಟಕುಗೊಳಿಸಿರುವ ಘಟನೆ ಇದೇ ಮೊದಲ ಬಾರಿ ನಡೆದಿದ್ದು ಅಲ್ಲ. ಜೆ.ಎಚ್.ಪಟೇಲರು ಸಿಎಂ ಆಗಿದ್ದಾಗ ಡಿಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ಅಂದಿನ ಸಂದರ್ಭವನ್ನು ನೆನಪು ಮಾಡಿಕೊಳ್ಳಬೇಕು. ಈಗ ನೋಡಿದರೆ ಅನಗತ್ಯವಾಗಿ ವಿಧಾನಸಭೆ ಕಲಾಪದಲ್ಲಿ ಸಂಘರ್ಷ ನಡೆಯುತ್ತಿದೆ. ಈ ಸಂಘರ್ಷಗಳಿಂದ ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆಯೇ ಎಂದು ಪ್ರಶ್ನಿಸಿದರು.

ಮನ್ರೇಗಾ ವಿಷಯ ಇಟ್ಟುಕೊಂಡು ಕೇಂದ್ರ ಸರ್ಕಾರವನ್ನು ನಿಂದಿಸುವುದು ರಾಜ್ಯ ಸರ್ಕಾರದ ಉದ್ದೇಶ. ಅದಕ್ಕಾಗಿಯೇ ವಿಶೇಷ ಅಧಿವೇಶನ ಕರೆದಿದ್ದಾರೆ. ಪದೇ ಪದೇ ದಲಿತರ ಹೆಸರು ಬಳಸಿಕೊಂಡು ತಮ್ಮ ಸ್ಥಾನಮಾನ ಗಟ್ಟಿಗೊಳಿಸುವ ಪ್ರಯತ್ನದಲ್ಲಿದ್ದಾರೆ. ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿದ್ದಾರೆ. ಇದು ದಲಿತರ ಉದ್ಧಾರವೇ? ಎಂದು ಕಿಡಿಕಾರಿದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago