Goats killed in cheetah attack
ಪಾಂಡವಪುರ : ತಾಲ್ಲೂಕಿನ ಇಂಗಲಕುಪ್ಪೆ ಗ್ರಾಮದ ರೈತ ಜವರೇಗೌಡರ ಕಾಳೇಗೌಡ ಎಂಬವರಿಗೆ ಸೇರಿದ ಮೂರು ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಮುಂಜಾನೆ ೫ ಗಂಟೆಯ ಸಮಯದಲ್ಲಿ ರೈತ ಕಾಳೇಗೌಡ ಮೇಕೆಗಳನ್ನು ಮನೆಯ ಮುಂದೆ ಕಟ್ಟಿದ್ದ ಸಂದರ್ಭದಲ್ಲಿ ಚಿರತೆ ದಾಳಿ ನಡೆಸಿ ಮೂರು ಮೇಕೆಗಳನ್ನು ಕೊಂದಿದೆ. ಮೇಕೆಗಳ ಕಿರುಚಾಟವನ್ನು ಗಮನಿಸಿ ಹೊರಬರುವಷ್ಟರಲ್ಲಿ ಚಿರತೆ ಪರಾರಿಯಾಗಿದೆ. ಮೇಕೆಗಳ ಸಾವಿನಿಂದ ರೈತ ಕಾಳೇಗೌಡರಿಗೆ ೫೦ ಸಾವಿರಕ್ಕೂ ಅಧಿಕ ನಷ್ಟ ಉಂಟಾಗಿದ್ದು, ಅರಣ್ಯ ಇಲಾಖೆಯಿಂದ ಸೂಕ್ತಪರಿಹಾರ ದೊರಕಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ಇಂಗಲಕುಪ್ಪೆ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಹಸು, ಕುರಿ, ಮೇಕೆಗಳ ಮೇಲೆ ಪದೇ ಪದೇ ದಾಳಿಗಳು ನಡೆಯುತ್ತಿವೆ. ರೈತರು ಜಮೀನುಗಳಿಗೆ ಹೋಗಲು ಭಯಪಡುವಂತಾಗಿದೆ. ಹಾಗಾಗಿ ಸಂಬಂಧಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಗಳ ಹಾವಳಿ ತಪ್ಪಿಸಲು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದು, ಇಲಾಖೆಯಿಂದ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು. ಜತೆಗೆ ಚಿರತೆಯ ಸೆರೆಗೆ ಬೋನ್ ಇಡಲಾಗುವುದು ಎಂದು ಭರವಸೆ ನೀಡಿದರು.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…