Goats killed in cheetah attack
ಪಾಂಡವಪುರ : ತಾಲ್ಲೂಕಿನ ಇಂಗಲಕುಪ್ಪೆ ಗ್ರಾಮದ ರೈತ ಜವರೇಗೌಡರ ಕಾಳೇಗೌಡ ಎಂಬವರಿಗೆ ಸೇರಿದ ಮೂರು ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಮುಂಜಾನೆ ೫ ಗಂಟೆಯ ಸಮಯದಲ್ಲಿ ರೈತ ಕಾಳೇಗೌಡ ಮೇಕೆಗಳನ್ನು ಮನೆಯ ಮುಂದೆ ಕಟ್ಟಿದ್ದ ಸಂದರ್ಭದಲ್ಲಿ ಚಿರತೆ ದಾಳಿ ನಡೆಸಿ ಮೂರು ಮೇಕೆಗಳನ್ನು ಕೊಂದಿದೆ. ಮೇಕೆಗಳ ಕಿರುಚಾಟವನ್ನು ಗಮನಿಸಿ ಹೊರಬರುವಷ್ಟರಲ್ಲಿ ಚಿರತೆ ಪರಾರಿಯಾಗಿದೆ. ಮೇಕೆಗಳ ಸಾವಿನಿಂದ ರೈತ ಕಾಳೇಗೌಡರಿಗೆ ೫೦ ಸಾವಿರಕ್ಕೂ ಅಧಿಕ ನಷ್ಟ ಉಂಟಾಗಿದ್ದು, ಅರಣ್ಯ ಇಲಾಖೆಯಿಂದ ಸೂಕ್ತಪರಿಹಾರ ದೊರಕಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ಇಂಗಲಕುಪ್ಪೆ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಹಸು, ಕುರಿ, ಮೇಕೆಗಳ ಮೇಲೆ ಪದೇ ಪದೇ ದಾಳಿಗಳು ನಡೆಯುತ್ತಿವೆ. ರೈತರು ಜಮೀನುಗಳಿಗೆ ಹೋಗಲು ಭಯಪಡುವಂತಾಗಿದೆ. ಹಾಗಾಗಿ ಸಂಬಂಧಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಗಳ ಹಾವಳಿ ತಪ್ಪಿಸಲು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದು, ಇಲಾಖೆಯಿಂದ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು. ಜತೆಗೆ ಚಿರತೆಯ ಸೆರೆಗೆ ಬೋನ್ ಇಡಲಾಗುವುದು ಎಂದು ಭರವಸೆ ನೀಡಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…