Goats killed in cheetah attack
ಪಾಂಡವಪುರ : ತಾಲ್ಲೂಕಿನ ಇಂಗಲಕುಪ್ಪೆ ಗ್ರಾಮದ ರೈತ ಜವರೇಗೌಡರ ಕಾಳೇಗೌಡ ಎಂಬವರಿಗೆ ಸೇರಿದ ಮೂರು ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಮುಂಜಾನೆ ೫ ಗಂಟೆಯ ಸಮಯದಲ್ಲಿ ರೈತ ಕಾಳೇಗೌಡ ಮೇಕೆಗಳನ್ನು ಮನೆಯ ಮುಂದೆ ಕಟ್ಟಿದ್ದ ಸಂದರ್ಭದಲ್ಲಿ ಚಿರತೆ ದಾಳಿ ನಡೆಸಿ ಮೂರು ಮೇಕೆಗಳನ್ನು ಕೊಂದಿದೆ. ಮೇಕೆಗಳ ಕಿರುಚಾಟವನ್ನು ಗಮನಿಸಿ ಹೊರಬರುವಷ್ಟರಲ್ಲಿ ಚಿರತೆ ಪರಾರಿಯಾಗಿದೆ. ಮೇಕೆಗಳ ಸಾವಿನಿಂದ ರೈತ ಕಾಳೇಗೌಡರಿಗೆ ೫೦ ಸಾವಿರಕ್ಕೂ ಅಧಿಕ ನಷ್ಟ ಉಂಟಾಗಿದ್ದು, ಅರಣ್ಯ ಇಲಾಖೆಯಿಂದ ಸೂಕ್ತಪರಿಹಾರ ದೊರಕಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ಇಂಗಲಕುಪ್ಪೆ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಹಸು, ಕುರಿ, ಮೇಕೆಗಳ ಮೇಲೆ ಪದೇ ಪದೇ ದಾಳಿಗಳು ನಡೆಯುತ್ತಿವೆ. ರೈತರು ಜಮೀನುಗಳಿಗೆ ಹೋಗಲು ಭಯಪಡುವಂತಾಗಿದೆ. ಹಾಗಾಗಿ ಸಂಬಂಧಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಗಳ ಹಾವಳಿ ತಪ್ಪಿಸಲು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದು, ಇಲಾಖೆಯಿಂದ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು. ಜತೆಗೆ ಚಿರತೆಯ ಸೆರೆಗೆ ಬೋನ್ ಇಡಲಾಗುವುದು ಎಂದು ಭರವಸೆ ನೀಡಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…