Mysore
23
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ.

28 ಮಂದಿ ಆರೋಪಿಗಳನ್ನು ಬಂಧಿಸಿ, 2.20 ಕೋಟಿ ರೂ. ಮೌಲ್ಯದ ಚಿನ್ನಾಭರಣ, 26 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲೆಯ ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ನಾಗಮಂಗಲ, ಮಳವಳ್ಳಿ ಉಪ ವಿಭಾಗಗಳಿಂದ ಒಟ್ಟಾರೆ 39 ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, 1.484 ಕೆ.ಜಿ. ಚಿನ್ನಾಭರಣ, 950 ಗ್ರಾಂ ಬೆಳ್ಳಿ, 26 ದ್ವಿಚಕ್ರ ವಾಹನಗಳು ಹಾಗೂ 30 ಸಾವಿರ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ತಿಳಿಸಿದರು.

Tags:
error: Content is protected !!