ಮಂಡ್ಯ

ನಿತ್ಯ ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ : ಎನ್ ಯತೀಶ್

ಮಂಡ್ಯ: ಪ್ರತಿದಿನ ಯೋಗಾಭ್ಯಾಸವನ್ನು ಮಾಡುವುದರಿಂದ ಉತ್ತಮ ಆರೋಗ್ಯವನ್ನು ರೂಪಿಸಿಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್  ತಿಳಿಸಿದರು.

ಅವರು ಇಂದು(ಜೂ.19) ಮಂಡ್ಯ ನಗರದ ಪೊಲೀಸ್ ಪೆರೆಡ್ ಮೈದಾನದಲ್ಲಿ ನಡೆದ ಯೋಗೋತ್ಸವ ಕಾರ್ಯಕ್ರಮವನ್ನು ಕುರಿತು ಮಾತನಾಡಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯ  ಸಂಬಂಧ ಇಂದು ಪೊಲೀಸ್ ಇಲಾಖೆಯ ಪೆರೆಡ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗೋತ್ಸವದಲ್ಲಿ ಸುಮಾರು 300 ಜನ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸೇರಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಭ್ಯಾಸ ಮಾಡಿದ್ದು ಬಹಳ ಖುಷಿಯಾಯಿತು ಇದೇ ರೀತಿ ಪ್ರತಿದಿನ ಕೂಡ ಯೋಗಾಭ್ಯಾಸವನ್ನು ಮಾಡಿ ಎಂದು ಸಲಹೆ ನೀಡಿದರು.

ಆರೋಗ್ಯದ ಕಡೆಗೆ ಹೆಚ್ಚಿನ ಒಲವು ಕೊಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಇನ್ನೂ ಹೆಚ್ಚಿನ ಸಾರ್ವಜನಿಕರು ಯೋಗಾಭ್ಯಾಸವನ್ನು ಮಾಡಿ ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ ಎಂದು ಹೇಳಿದರು.

ಮನುಷ್ಯನಿಗೆ ನೀರು ಅತಿಮುಖ್ಯವಾದ ಅಂಶ:ಡಾ. ಸೀತಾಲಕ್ಷ್ಮಿ

ದಿನ ನಿತ್ಯ ಜೀವನದಲ್ಲಿ ಸುಮಾರು ಜನರು ನೀರನ್ನು ಬಹಳ ಕಮ್ಮಿ ಕುಡಿಯುತ್ತಾರೆ ಇದರಿಂದ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತವೆ, ನೀರು ಕಡಿಮೆ ಕುಡಿಯುವುದರಿಂದ ಕಿಡ್ನಿಯಲ್ಲಿ ಸ್ಟೋನ್ ತೊಂದರೆ, ಸುಸ್ತು, ಆಯಾಸ ಮತ್ತು ಚರ್ಮದ ತೊಂದರೆಗಳು ಉಂಟಾಗುತ್ತದೆ. ಆದ್ದರಿಂದ ಒಂದು ಹೊತ್ತು ಊಟ ಕಡಿಮೆ ಮಾಡಿದರು ಕೂಡ ನೀರು ಕುಡಿಯುವುದನ್ನು ಕಮ್ಮಿ ಮಾಡಬಾರದು ನೀರು ಆರೋಗ್ಯಕ್ಕೆ ಬಹಳ ಮುಖ್ಯ ಎಂದು ಹೇಳಿದರು.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದರೆ ನಮ್ಮ ದಿನ ನಿತ್ಯ ಆಹಾರದ ಪದ್ದತಿಯಲ್ಲಿ ಹೆಚ್ಚಾಗಿ ನೀರು ಕುಡಿಯುವ ಅಭ್ಯಾಸ, ಹಸಿ ತರಕಾರಿ ಗಳು, ಹಣ್ಣು ಹಂಪಲು, ಮೊಳಕೆ ಕಟ್ಟಿದ ಕಾಳುಗಳನ್ನು ಹೆಚ್ಚಾಗಿ ಸೇವನೆ ಮಾಡಬೇಕು ಎಂದು ಹೇಳಿದರು.

ಮಾಂಸಹಾರ ಸೇವನೆ ಮಾಡುವುದು ತಪ್ಪಲ್ಲ ಆದರೆ ಪ್ರತಿದಿನ ಸೇವನೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ ಆದ್ದರಿಂದ ಕಡಿಮೆ ಪ್ರಮಾಣದಲ್ಲಿ ಸೇವನೆ ಮಾಡಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಎ ಎಸ್‌.ಪಿ ತಿಮ್ಮಯ್ಯ, ಡಿ.ವೈ.ಎಸ್.ಪಿ ಗಂಗಾಧರ ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

10 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

12 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

12 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

13 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

13 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

13 hours ago