ಮಂಡ್ಯ

ಬಸ್‌ ಅಡ್ಡಗಟ್ಟಿ ಹೆಣ್ಣು ಮಕ್ಕಳನ್ನು ಕೆಣಕಲು ಯತ್ನಿಸಿದ ಪುಂಡರು : ತಡೆಯಲೆತ್ನಿಸಿದ ಕಂಡಕ್ಟರ್‌ ಮೇಲೆ ಹಲ್ಲೆ

ಕೆ.ಆರ್.ಪೇಟೆ : ಯುವಕರ ಗುಂಪೊಂದು ವಿನಾಕಾರಣ ಹೆಣ್ಣು ಮಕ್ಕಳು ಇರುವ ಕೆಎಸ್‌ಆರ್‌ಟಿಸಿ ಬಸ್ಸನ್ನು ಅಡ್ಡಗಟ್ಟಿ ಹೆಣ್ಣು ಮಕ್ಕಳನ್ನು ಕೆಣಕಲು ಪ್ರಯತ್ನಿಸಿ, ಅದು ಸಾಧ್ಯವಾಗದೇ ಇದ್ದಾಗ ಬಸ್ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ವಿಠಲಾಪುರ ಮಾರ್ಗದ ಪಿಡಿಜಿ ಕೊಪ್ಪಲು ಗೇಟ್ ಬಳಿ ನಡೆದಿದೆ.

ಬೈಕ್‌ನಲ್ಲಿ ಬಂದಿರುವ ನಾರ್ಗೋನಹಳ್ಳಿ ಗ್ರಾಮದ ಧರ್ಮ, ಭರತ್, ತಿಮ್ಮ, ಶೇಖರ್ ಎಂಬವರು ಬಸ್ಸನ್ನು ಅಡ್ಡಗಟ್ಟಿ ಬಸ್ಸಿನ ಒಳಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಹೆಣ್ಣು ಮಕ್ಕಳಿದ್ದ ಕಾರಣ ಯುವಕರ ಗುಂಪು ಬಸ್ಸಿನೊಳಗೆ ನುಗ್ಗದಂತೆ ತಡೆದು ಹೆಣ್ಣು ಮಕ್ಕಳ ಸುರಕ್ಷತೆಗೆ ಕಂಡಕ್ಟರ್ ಜಗದೀಶ್ ಮತ್ತು ಚಾಲಕ ಈರಗಂಟಪ್ಪ ಮುಂದಾಗಿದ್ದಾರೆ. ಬಸ್ಸಿನೊಳಗೆ ಹೋಗುತ್ತಿದ್ದವರನ್ನು ತಡೆದ ಹಿನ್ನೆಲೆಯಲ್ಲಿ ಕಲ್ಲಿನಿಂದ ಕಂಡಕ್ಟರ್ ಮತ್ತು ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಕಂಡಕ್ಟರ್ ಜಗದೀಶ್ ಅವರಿಗೆ ತಲೆ ಮತ್ತು ಕಣ್ಣಿನ ಭಾಗಕ್ಕೆ ಗಂಭೀರವಾದ ಗಾಯಳಾಗಿವೆ. ಡ್ರೈವರ್ ಈರಗಂಟಪ್ಪ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಬಸ್ಸಿನ ನಿರ್ವಾಹಕ ಜಗದೀಶ್ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಲಾಯಿತು. ನಂತರ ವೈದ್ಯರ ಸಲಹೆಯ ಮೇರೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪಟ್ಟಣದ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಸಾರಿಗೆ ನೌಕರರ ಪ್ರತಿಭಟನೆ:
ಪಿಡಿಜಿ ಕೊಪ್ಪಲು ಗೇಟ್ ಬಳಿ ಯುವಕರ ಗುಂಪು ಬಸ್ ಅನ್ನು ಅಡ್ಡಗಟ್ಟಿ ತಮ್ಮ ಸಾರಿಗೆ ಇಲಾಖೆಯ ನೌಕರರ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿ ತಾಲ್ಲೂಕು ಕೆಎಸ್‌ಆರ್‌ಟಿಸಿ ನೌಕರರ ಯೂನಿಯನ್ ವತಿಯಿಂದ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿ ಕೂಡಲೇ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಽಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago