ಮಂಡ್ಯ

ಜೀತ ವಿಮುಕ್ತರಿಗೆ ಸರ್ಕಾರಿ ದಾಖಲೆ ; ವಿಶೇಷ ಅಭಿಯಾನ

ಮಂಡ್ಯ : ಸರ್ಕಾರದ ಸೌಲಭ್ಯ, ಸವಲತ್ತುಗಳು ಜೀತವಿಮುಕ್ತ ಕುಟುಂಬಗಳಿಗೆ ತಲುಪಬೇಕು ಎಂಬ ಸದುದ್ದೇಶದಿಂದ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸರ್ಕಾರದ 13 ಸರ್ಕಾರಿ ದಾಖಲೆಗಳನ್ನು ಒದಗಿಸಲು “ನನ್ನ ಗುರುತು” ಎಂಬ ವಿಶೇಷ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ತಿಳಿಸಿದರು.

ಇಂದು(ಜು.20) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಜೀತ ವಿಮುಕ್ತರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಜೀತವಿಮಕ್ತರ ಸಂಘಟನೆಗಳೊಂದಿಗೆ ಆಯೋಜಿಸಲಾಗಿದ್ದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಭಿಯಾನವನ್ನು ಯಶಸ್ವಿಗೊಳಿಸಲು ಜಿಲ್ಲೆಯಲ್ಲಿರುವ ಜೀತವಿಮುಕ್ತಗೊಂಡ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಿ ಒಂದು ತಿಂಗಳೊಳಗಾಗಿ ವರದಿ ನೀಡಬೇಕು ಎಂದು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.

ಮುಂದಿನ ಜುಲೈ ಮಾಹೆಯಲ್ಲಿ ಸಭೆಯನ್ನು ನಡೆಸಿ ವಿಶೇಷ ಅಭಿಯಾನದ ದಿನಾಂಕವನ್ನು ತಿಳಿಸಲಾಗುವುದು. ಜಿಲ್ಲೆಯ ಪ್ರತಿ ತಾಲ್ಲೂಕುಗಳಲ್ಲಿ ಸಮೀಕ್ಷೆ ನಡೆಸಿ ನಿವೇಶನ ಹಾಗೂ ವಸತಿ ರಹಿತರ ಪಟ್ಟಿಯನ್ನು ತಯಾರಿಸಿ ಹಾಗೂ ವಿಶೇಷ ಅಭಿಯಾನ ಕುರಿತು ಜೀತವಿಮುಕ್ತ ಕುಟುಂಬದವರಿಗೆ ಮಾಹಿತಿ ನೀಡಿ ಎಂದು ಹೇಳಿದರು.

ಜೀತವಿಮುಕ್ತರಿಗೆ ಸಾಧ್ಯವಾದಷ್ಟು ಸ್ಥಳೀಯ ಮಟ್ಟದಲ್ಲಿ ಪುನರ್ವಸತಿ ಕಲ್ಪಿಸಿಕೊಡಲು ಪ್ರಯತ್ನಿಸಿ ಮತ್ತು 13 ಸರ್ಕಾರಿ ದಾಖಲೆಗಳೊಂದಿಗೆ ಇ-ಆಸ್ತಿ ಖಾತೆಯನ್ನು ಸಹ ಕಲ್ಪಿಸಿಕೊಡಿ ಎಂದರು.

 

ವಿವಿಧ ಕೌಶಲ್ಯಗಳನ್ನು ಕೊಡಿಸಿ: ಜೀತ ಮಾಡುವುದು ಕಾನೂನು ಬಾಹಿರವಾಗಿದ್ದು, ವಂಶ ಪಾರಂಪರಿಕವಾಗಿ ಜೀತ ಮಾಡುತ್ತಿರುವುದು ಕಂಡು ಬಂದಲ್ಲಿ ಕ್ರಮಕೈಗೊಳ್ಳಿ ಹಾಗೂ ಜೀತವಿಮುಕ್ತ ಕುಟುಂಬದ ಮಕ್ಕಳು ಜೀವನ ರೂಪಿಸಿಕೊಳ್ಳಲು ವಿವಿಧ ಕೌಶಲ್ಯ ತರಬೇತಿಗಳನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜೀತವಿಮುಕ್ತ ಕುಟುಂಬದ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು. ಈ ನಿಟ್ಟಿನಲ್ಲಿ ಕಂಪ್ಯೂಟರ್ ಕೌಶಲ್ಯ, ಸಂವಹನ ಕೌಶಲ್ಯ ಹಾಗೂ ಚಾಲ್ತಿಯಲ್ಲಿರುವ ಇನ್ನಿತರ ಕೌಶಲ್ಯಗಳನ್ನು ಗುರುತಿಸಿ ತರಬೇತಿ ನೀಡಿ ಉದ್ಯೋಗ ಕಲ್ಪಿಸಿ ಎಂದರು.

ನನ್ನ ಗುರುತು ವಿಶೇಷ ಅಭಿಯಾನದಲ್ಲಿ ಒದಗಿಸಲಾಗುವ 13 ಸರ್ಕಾರಿ ದಾಖಲೆಗಳು

1.ಆಧಾರ್ ಕಾರ್ಡ್, 2.ಜನನ ಪ್ರಮಾಣ ಪತ್ರ, 3.ಜಾತಿ-ಆದಾಯ ಪ್ರಮಾಣ ಪತ್ರ, 4 ಇ -ಶ್ರಮ್ ಕಾರ್ಡ್ 5.ಪಡಿತರ ಚೀಟಿ, 6. ಮತದಾರರ ಗುರುತಿನ ಚೀಟಿ, 7.ಬ್ಯಾಂಕ್ ಖಾತೆ, 8.ಸಾಮಾಜಿಕ ಪಿಂಚಣಿ,9. ಪಿ.ಎಂ.ಜೆ.ಜೆ.ಬಿ.ವೈ, 10.ಪಿ. ಎಂ. ಎಸ್. ಬಿ. ವೈ, 11.ಯು.ಡಿ.ಐ. ಡಿ, 12. ನರೇಗಾ ಜಾಬ್ ಕಾರ್ಡ್, 13.ಅಭಾ ಕಾರ್ಡ್,

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಧನುಷ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜೀತವಿಮುಕ್ತ ಸಂಘಟನೆಗಳ ಅಧ್ಯಕ್ಷರು, ಸದಸ್ಯರುಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

4 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

4 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

4 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

5 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 hours ago