ಮಂಡ್ಯ

ಜೀತ ವಿಮುಕ್ತರಿಗೆ ಸರ್ಕಾರಿ ದಾಖಲೆ ; ವಿಶೇಷ ಅಭಿಯಾನ

ಮಂಡ್ಯ : ಸರ್ಕಾರದ ಸೌಲಭ್ಯ, ಸವಲತ್ತುಗಳು ಜೀತವಿಮುಕ್ತ ಕುಟುಂಬಗಳಿಗೆ ತಲುಪಬೇಕು ಎಂಬ ಸದುದ್ದೇಶದಿಂದ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸರ್ಕಾರದ 13 ಸರ್ಕಾರಿ ದಾಖಲೆಗಳನ್ನು ಒದಗಿಸಲು “ನನ್ನ ಗುರುತು” ಎಂಬ ವಿಶೇಷ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ತಿಳಿಸಿದರು.

ಇಂದು(ಜು.20) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಜೀತ ವಿಮುಕ್ತರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಜೀತವಿಮಕ್ತರ ಸಂಘಟನೆಗಳೊಂದಿಗೆ ಆಯೋಜಿಸಲಾಗಿದ್ದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಭಿಯಾನವನ್ನು ಯಶಸ್ವಿಗೊಳಿಸಲು ಜಿಲ್ಲೆಯಲ್ಲಿರುವ ಜೀತವಿಮುಕ್ತಗೊಂಡ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಿ ಒಂದು ತಿಂಗಳೊಳಗಾಗಿ ವರದಿ ನೀಡಬೇಕು ಎಂದು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.

ಮುಂದಿನ ಜುಲೈ ಮಾಹೆಯಲ್ಲಿ ಸಭೆಯನ್ನು ನಡೆಸಿ ವಿಶೇಷ ಅಭಿಯಾನದ ದಿನಾಂಕವನ್ನು ತಿಳಿಸಲಾಗುವುದು. ಜಿಲ್ಲೆಯ ಪ್ರತಿ ತಾಲ್ಲೂಕುಗಳಲ್ಲಿ ಸಮೀಕ್ಷೆ ನಡೆಸಿ ನಿವೇಶನ ಹಾಗೂ ವಸತಿ ರಹಿತರ ಪಟ್ಟಿಯನ್ನು ತಯಾರಿಸಿ ಹಾಗೂ ವಿಶೇಷ ಅಭಿಯಾನ ಕುರಿತು ಜೀತವಿಮುಕ್ತ ಕುಟುಂಬದವರಿಗೆ ಮಾಹಿತಿ ನೀಡಿ ಎಂದು ಹೇಳಿದರು.

ಜೀತವಿಮುಕ್ತರಿಗೆ ಸಾಧ್ಯವಾದಷ್ಟು ಸ್ಥಳೀಯ ಮಟ್ಟದಲ್ಲಿ ಪುನರ್ವಸತಿ ಕಲ್ಪಿಸಿಕೊಡಲು ಪ್ರಯತ್ನಿಸಿ ಮತ್ತು 13 ಸರ್ಕಾರಿ ದಾಖಲೆಗಳೊಂದಿಗೆ ಇ-ಆಸ್ತಿ ಖಾತೆಯನ್ನು ಸಹ ಕಲ್ಪಿಸಿಕೊಡಿ ಎಂದರು.

 

ವಿವಿಧ ಕೌಶಲ್ಯಗಳನ್ನು ಕೊಡಿಸಿ: ಜೀತ ಮಾಡುವುದು ಕಾನೂನು ಬಾಹಿರವಾಗಿದ್ದು, ವಂಶ ಪಾರಂಪರಿಕವಾಗಿ ಜೀತ ಮಾಡುತ್ತಿರುವುದು ಕಂಡು ಬಂದಲ್ಲಿ ಕ್ರಮಕೈಗೊಳ್ಳಿ ಹಾಗೂ ಜೀತವಿಮುಕ್ತ ಕುಟುಂಬದ ಮಕ್ಕಳು ಜೀವನ ರೂಪಿಸಿಕೊಳ್ಳಲು ವಿವಿಧ ಕೌಶಲ್ಯ ತರಬೇತಿಗಳನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜೀತವಿಮುಕ್ತ ಕುಟುಂಬದ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು. ಈ ನಿಟ್ಟಿನಲ್ಲಿ ಕಂಪ್ಯೂಟರ್ ಕೌಶಲ್ಯ, ಸಂವಹನ ಕೌಶಲ್ಯ ಹಾಗೂ ಚಾಲ್ತಿಯಲ್ಲಿರುವ ಇನ್ನಿತರ ಕೌಶಲ್ಯಗಳನ್ನು ಗುರುತಿಸಿ ತರಬೇತಿ ನೀಡಿ ಉದ್ಯೋಗ ಕಲ್ಪಿಸಿ ಎಂದರು.

ನನ್ನ ಗುರುತು ವಿಶೇಷ ಅಭಿಯಾನದಲ್ಲಿ ಒದಗಿಸಲಾಗುವ 13 ಸರ್ಕಾರಿ ದಾಖಲೆಗಳು

1.ಆಧಾರ್ ಕಾರ್ಡ್, 2.ಜನನ ಪ್ರಮಾಣ ಪತ್ರ, 3.ಜಾತಿ-ಆದಾಯ ಪ್ರಮಾಣ ಪತ್ರ, 4 ಇ -ಶ್ರಮ್ ಕಾರ್ಡ್ 5.ಪಡಿತರ ಚೀಟಿ, 6. ಮತದಾರರ ಗುರುತಿನ ಚೀಟಿ, 7.ಬ್ಯಾಂಕ್ ಖಾತೆ, 8.ಸಾಮಾಜಿಕ ಪಿಂಚಣಿ,9. ಪಿ.ಎಂ.ಜೆ.ಜೆ.ಬಿ.ವೈ, 10.ಪಿ. ಎಂ. ಎಸ್. ಬಿ. ವೈ, 11.ಯು.ಡಿ.ಐ. ಡಿ, 12. ನರೇಗಾ ಜಾಬ್ ಕಾರ್ಡ್, 13.ಅಭಾ ಕಾರ್ಡ್,

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಧನುಷ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜೀತವಿಮುಕ್ತ ಸಂಘಟನೆಗಳ ಅಧ್ಯಕ್ಷರು, ಸದಸ್ಯರುಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

7 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

7 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

8 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

9 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

9 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

17 hours ago