ಮಂಡ್ಯ

ಸರ್ಕಾರದ ಪ್ರೋತ್ಸಾಹ ಧನ ಸಾಲಕ್ಕೆ ಕಡಿತವಾಗದಿರಲಿ : ಶಾಸಕ ದರ್ಶನ್‌ ಪುಟ್ಟಣಯ್ಯ

ಮಂಡ್ಯ : ಸರ್ಕಾರದ ಪ್ರೋತ್ಸಾಹ ಧನಗಳು ರೈತರ ಸಾಲಗಳಿಗೆ ಕಡಿತವಾಗದಂತೆ ಸಾಫ್ಟವೇರ್‌ ಅಳವಡಿಸಿಕೊಳ್ಳಿ ಎಂದು ಬ್ಯಾಂಕ್‌ ವ್ಯವಸ್ಥಾಪಕರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಬ್ಯಾಂಕ್ ಗಳ ವ್ಯವಸ್ಥಾಪಕರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತರು ಬ್ಯಾಂಕ್‌ ಗಳಲ್ಲಿ ಸಾಲ ಪಡೆದ ನಂತರ ಪ್ರತಿ ಮಾಹೆ ಖಾತೆಯಿಂದ ಸಾಲದ ಹಣ ನಿಗದಿತ ದಿನಾಂಕದಂದು ಸ್ವಯಂಚಾಲಿತವಾಗಿ ಕಡಿತವಾಗುತ್ತದೆ. ಈ ನಿಯಮ ಸರ್ಕಾರದ ಪ್ರೊತ್ಸಾಹ ಹಣಗಳಿಗೆ ತಾಕದಂತೆ ಬ್ಯಾಂಕ್ ವ್ಯವಸ್ಥಾಪಕರು ಕೇಂದ್ರ ಕಚೇರಿಗೆ ಪತ್ರ ಬರೆಯಬೇಕು ಎಂದರು.

ರೈತರು ಅಥವಾ ಸಾರ್ವಜನಿಕರಿಗೆ ಸರ್ಕಾರದಿಂದ ನೀಡುವ ಪ್ರೋತ್ಸಾಹ ಧನ ಸಾಲದ ಇ.ಎಂ‌.ಐ.ಗೆ ಕಡಿತ ಮಾಡಿಕೊಂಡ ನಂತರ ಸಂಬಂಧಿಸಿದವರು ಬ್ಯಾಂಕ್ ಗೆ ತೆರಳಿ ತಿಳಿಸಿದರೆ ಸಹಾಯಧನ ಖಾತೆಗೆ ಹಿಂದಿರುಗಿಸುವ ಬದಲು ಸಾಫ್ಟ್‌ವೇರ್ ಅಳವಡಿಸಿಕೊಳ್ಳಿ. ಬ್ಯಾಂಕಿಗೆ ತೆರಳಿ ಪ್ರಶ್ನಿಸುವ ಸಾಮರ್ಥ್ಯ ಎಲ್ಲಾ ಜನರು ಹೊಂದಿರುವುದಿಲ್ಲ. ಬ್ಯಾಂಕ್ ನಡೆಯುವುದು ಗ್ರಾಹಕರಿಂದ. ಗ್ರಾಮೀಣ ಪ್ರದೇಶದಲ್ಲಿ ಬಡ ರೈತರು ಬ್ಯಾಂಕಿನ ಗ್ರಾಹಕರಾಗಿದ್ದು, ಅವರೊಂದಿಗೆ ಗೌರವದಿಂದ ವರ್ತಿಸಿ. ಬ್ಯಾಂಕ್ ವ್ಯವಹಾರ ಹಾಗೂ ವಿವಿಧ ಮಾನದಂಡಗಳ ಬಗ್ಗೆ ಅವರಿಗೆ ಅರ್ಥವಾಗುವ ರೀತಿ ಕನ್ನಡದಲ್ಲಿ ತಿಳಿಸಿ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ, ಸರ್ಕಾರದಿಂದ ನೀಡಲಾಗುವ ವಿವಿಧ ರೀತಿಯ ಸಾಮಾಜಿಕ ಪಿಂಚಣಿ, ಹಾಲಿನ ಪ್ರೋತ್ಸಾಹ ಧನ, ಅನ್ನ ಭಾಗ್ಯ, ಗೃಹ ಲಕ್ಷ್ಮಿ, ಹಣ, ಮನರೇಗಾ ಕೂಲಿ, ಬೆಳೆ ನಷ್ಠದ ಹಣವನ್ನು ಮಾನವೀಯ ದೃಷ್ಠಿಯಿಂದ ಸಾಲದ ಮರುಪಾವತಿಗೆ ಕಡಿತ ಮಾಡಬೇಡಿ ಎಂದರು.

ಕನ್ನಡದಲ್ಲಿ ವ್ಯವಹರಿಸಿ: ಮಂಡ್ಯ ಜಿಲ್ಲೆ ರೈತರ ಜಿಲ್ಲೆಯಗಿದ್ದು, ಅವರೊಂದಿಗೆ ಕನ್ನಡದಲ್ಲಿ ವ್ಯವಹರಿಸಿ. ಬಹಳಷ್ಟು ಬ್ಯಾಂಕ್ ಸಿಬ್ಬಂದಿ ಹಾಗೂ ವ್ಯವಸ್ಥಾಪಕರಿಗೆ ಕನ್ನಡ ತಿಳಿದಿದ್ದರು, ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತನಾಡುತ್ತಾರೆ. ಈ ಧೋರಣೆ ಬದಲಾಗಬೇಕು ಎಂದರು.

ರೈತರು ಪಡೆಯುವ ಬೆಳೆ ಸಾಲವನ್ನು ನಿಗದಿತ ಅವಧಿಯಲ್ಲಿ ಪಾವತಿ ಮಾಡಿದರೆ ಬಡ್ಡಿಯ ಹಣದ ಶೇ 3 ರಷ್ಟು ರಿಬೇಟ್ ಹಿಂದಿರುಗಿಸುವ ಯೋಜನೆಯಿದ್ದು ಇದರ ಬಗ್ಗೆ ರೈತರಿಗೆ ಮಾಹಿತಿ ನೀಡಿ ಎಂದರು.

ಬ್ಯಾಂಕ್ ಗೆ ಸಂಬಂಧಿಸಿದಂತೆ ಗ್ರಾಹಕರ ಸೇವಾ‌ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಸೇವಾ ಕೇಂದ್ರಗಳಲ್ಲಿ ಸಿ.ಸಿ.ಟಿವಿ ಅಳವಡಿಸುವುದು ಉತ್ತಮ. ಇದರಿಂದ ಗ್ರಾಹಕರಿಂದ ದೂರು ಬಂದಲ್ಲಿ ಪರಿಶೀಲಿಸಲು ಸುಲಭ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್, ರೈತ ಸಂಘಟನೆಗಳ ಮುಖಂಡರು ಸೇರಿದಂತೆ ವಿವಿಧ ಬ್ಯಾಂಕ್ ವ್ಯವಸ್ಥಾಪಕರು ಉಪಸ್ಥಿತರಿದ್ದರು‌.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

7 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

8 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

8 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

8 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

8 hours ago