ಮಂಡ್ಯ

ಸರ್ಕಾರದ ಪ್ರೋತ್ಸಾಹ ಧನ ಸಾಲಕ್ಕೆ ಕಡಿತವಾಗದಿರಲಿ : ಶಾಸಕ ದರ್ಶನ್‌ ಪುಟ್ಟಣಯ್ಯ

ಮಂಡ್ಯ : ಸರ್ಕಾರದ ಪ್ರೋತ್ಸಾಹ ಧನಗಳು ರೈತರ ಸಾಲಗಳಿಗೆ ಕಡಿತವಾಗದಂತೆ ಸಾಫ್ಟವೇರ್‌ ಅಳವಡಿಸಿಕೊಳ್ಳಿ ಎಂದು ಬ್ಯಾಂಕ್‌ ವ್ಯವಸ್ಥಾಪಕರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಬ್ಯಾಂಕ್ ಗಳ ವ್ಯವಸ್ಥಾಪಕರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತರು ಬ್ಯಾಂಕ್‌ ಗಳಲ್ಲಿ ಸಾಲ ಪಡೆದ ನಂತರ ಪ್ರತಿ ಮಾಹೆ ಖಾತೆಯಿಂದ ಸಾಲದ ಹಣ ನಿಗದಿತ ದಿನಾಂಕದಂದು ಸ್ವಯಂಚಾಲಿತವಾಗಿ ಕಡಿತವಾಗುತ್ತದೆ. ಈ ನಿಯಮ ಸರ್ಕಾರದ ಪ್ರೊತ್ಸಾಹ ಹಣಗಳಿಗೆ ತಾಕದಂತೆ ಬ್ಯಾಂಕ್ ವ್ಯವಸ್ಥಾಪಕರು ಕೇಂದ್ರ ಕಚೇರಿಗೆ ಪತ್ರ ಬರೆಯಬೇಕು ಎಂದರು.

ರೈತರು ಅಥವಾ ಸಾರ್ವಜನಿಕರಿಗೆ ಸರ್ಕಾರದಿಂದ ನೀಡುವ ಪ್ರೋತ್ಸಾಹ ಧನ ಸಾಲದ ಇ.ಎಂ‌.ಐ.ಗೆ ಕಡಿತ ಮಾಡಿಕೊಂಡ ನಂತರ ಸಂಬಂಧಿಸಿದವರು ಬ್ಯಾಂಕ್ ಗೆ ತೆರಳಿ ತಿಳಿಸಿದರೆ ಸಹಾಯಧನ ಖಾತೆಗೆ ಹಿಂದಿರುಗಿಸುವ ಬದಲು ಸಾಫ್ಟ್‌ವೇರ್ ಅಳವಡಿಸಿಕೊಳ್ಳಿ. ಬ್ಯಾಂಕಿಗೆ ತೆರಳಿ ಪ್ರಶ್ನಿಸುವ ಸಾಮರ್ಥ್ಯ ಎಲ್ಲಾ ಜನರು ಹೊಂದಿರುವುದಿಲ್ಲ. ಬ್ಯಾಂಕ್ ನಡೆಯುವುದು ಗ್ರಾಹಕರಿಂದ. ಗ್ರಾಮೀಣ ಪ್ರದೇಶದಲ್ಲಿ ಬಡ ರೈತರು ಬ್ಯಾಂಕಿನ ಗ್ರಾಹಕರಾಗಿದ್ದು, ಅವರೊಂದಿಗೆ ಗೌರವದಿಂದ ವರ್ತಿಸಿ. ಬ್ಯಾಂಕ್ ವ್ಯವಹಾರ ಹಾಗೂ ವಿವಿಧ ಮಾನದಂಡಗಳ ಬಗ್ಗೆ ಅವರಿಗೆ ಅರ್ಥವಾಗುವ ರೀತಿ ಕನ್ನಡದಲ್ಲಿ ತಿಳಿಸಿ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ, ಸರ್ಕಾರದಿಂದ ನೀಡಲಾಗುವ ವಿವಿಧ ರೀತಿಯ ಸಾಮಾಜಿಕ ಪಿಂಚಣಿ, ಹಾಲಿನ ಪ್ರೋತ್ಸಾಹ ಧನ, ಅನ್ನ ಭಾಗ್ಯ, ಗೃಹ ಲಕ್ಷ್ಮಿ, ಹಣ, ಮನರೇಗಾ ಕೂಲಿ, ಬೆಳೆ ನಷ್ಠದ ಹಣವನ್ನು ಮಾನವೀಯ ದೃಷ್ಠಿಯಿಂದ ಸಾಲದ ಮರುಪಾವತಿಗೆ ಕಡಿತ ಮಾಡಬೇಡಿ ಎಂದರು.

ಕನ್ನಡದಲ್ಲಿ ವ್ಯವಹರಿಸಿ: ಮಂಡ್ಯ ಜಿಲ್ಲೆ ರೈತರ ಜಿಲ್ಲೆಯಗಿದ್ದು, ಅವರೊಂದಿಗೆ ಕನ್ನಡದಲ್ಲಿ ವ್ಯವಹರಿಸಿ. ಬಹಳಷ್ಟು ಬ್ಯಾಂಕ್ ಸಿಬ್ಬಂದಿ ಹಾಗೂ ವ್ಯವಸ್ಥಾಪಕರಿಗೆ ಕನ್ನಡ ತಿಳಿದಿದ್ದರು, ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತನಾಡುತ್ತಾರೆ. ಈ ಧೋರಣೆ ಬದಲಾಗಬೇಕು ಎಂದರು.

ರೈತರು ಪಡೆಯುವ ಬೆಳೆ ಸಾಲವನ್ನು ನಿಗದಿತ ಅವಧಿಯಲ್ಲಿ ಪಾವತಿ ಮಾಡಿದರೆ ಬಡ್ಡಿಯ ಹಣದ ಶೇ 3 ರಷ್ಟು ರಿಬೇಟ್ ಹಿಂದಿರುಗಿಸುವ ಯೋಜನೆಯಿದ್ದು ಇದರ ಬಗ್ಗೆ ರೈತರಿಗೆ ಮಾಹಿತಿ ನೀಡಿ ಎಂದರು.

ಬ್ಯಾಂಕ್ ಗೆ ಸಂಬಂಧಿಸಿದಂತೆ ಗ್ರಾಹಕರ ಸೇವಾ‌ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಸೇವಾ ಕೇಂದ್ರಗಳಲ್ಲಿ ಸಿ.ಸಿ.ಟಿವಿ ಅಳವಡಿಸುವುದು ಉತ್ತಮ. ಇದರಿಂದ ಗ್ರಾಹಕರಿಂದ ದೂರು ಬಂದಲ್ಲಿ ಪರಿಶೀಲಿಸಲು ಸುಲಭ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್, ರೈತ ಸಂಘಟನೆಗಳ ಮುಖಂಡರು ಸೇರಿದಂತೆ ವಿವಿಧ ಬ್ಯಾಂಕ್ ವ್ಯವಸ್ಥಾಪಕರು ಉಪಸ್ಥಿತರಿದ್ದರು‌.

ಆಂದೋಲನ ಡೆಸ್ಕ್

Recent Posts

ಜೆಡಿಯುಗೆ ಸೇರ್ಪಡೆಯಾದ ಬಿಹಾರ ಸಿಎಂ ನಿತೀಶ್‌ ಪುತ್ರ ನಿಶಾಂತ್ ಕುಮಾರ್‌

ಪಾಟ್ನಾ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್‌ ಕುಮಾರ್‌ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…

3 mins ago

ಇರಾನ್-‌ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಇರಾನ್‌ ಮೇಲೆ ಇಸ್ರೇಲ್‌, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…

15 mins ago

ನಿಮ್ಮ ಕೆಲಸ ಎಷ್ಟಿದೆ ಅದನ್ನು ನೋಡಿಕೊಳ್ಳಿ: ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ

ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌…

30 mins ago

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಲೋಪ: ಬಂಗಾಳ ಸರ್ಕಾರದಿಂದ ವರದಿ ಕೇಳಿದ ಗೃಹ ಕಾರ್ಯದರ್ಶಿ

ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್‌ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ…

44 mins ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: 52,000 ಭಾರತೀಯರು ತಾಯ್ನಾಡಿಗೆ ವಾಪಸ್‌

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ್‌ ಮುಂದುವರಿದಿರುವ ಹಿನ್ನೆಲೆಯಲ್ಲಿ 52,000 ಭಾರತೀಯರು ತಾಯ್ನಾಡಿಗೆ ವಾಪಸ್‌ ಆಗಿದ್ದಾರೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ…

1 hour ago

ಮಂಡ್ಯ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ: ಎನ್. ಚಲುವರಾಯಸ್ವಾಮಿ

ಮಂಡ್ಯ: ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣವಾಗಿ ಅಭಿವೃದ್ಧಿ ಆಗಬೇಕು.…

1 hour ago