ಮಂಡ್ಯ

ಸರ್ಕಾರದ ಪ್ರೋತ್ಸಾಹ ಧನ ಸಾಲಕ್ಕೆ ಕಡಿತವಾಗದಿರಲಿ : ಶಾಸಕ ದರ್ಶನ್‌ ಪುಟ್ಟಣಯ್ಯ

ಮಂಡ್ಯ : ಸರ್ಕಾರದ ಪ್ರೋತ್ಸಾಹ ಧನಗಳು ರೈತರ ಸಾಲಗಳಿಗೆ ಕಡಿತವಾಗದಂತೆ ಸಾಫ್ಟವೇರ್‌ ಅಳವಡಿಸಿಕೊಳ್ಳಿ ಎಂದು ಬ್ಯಾಂಕ್‌ ವ್ಯವಸ್ಥಾಪಕರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಬ್ಯಾಂಕ್ ಗಳ ವ್ಯವಸ್ಥಾಪಕರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತರು ಬ್ಯಾಂಕ್‌ ಗಳಲ್ಲಿ ಸಾಲ ಪಡೆದ ನಂತರ ಪ್ರತಿ ಮಾಹೆ ಖಾತೆಯಿಂದ ಸಾಲದ ಹಣ ನಿಗದಿತ ದಿನಾಂಕದಂದು ಸ್ವಯಂಚಾಲಿತವಾಗಿ ಕಡಿತವಾಗುತ್ತದೆ. ಈ ನಿಯಮ ಸರ್ಕಾರದ ಪ್ರೊತ್ಸಾಹ ಹಣಗಳಿಗೆ ತಾಕದಂತೆ ಬ್ಯಾಂಕ್ ವ್ಯವಸ್ಥಾಪಕರು ಕೇಂದ್ರ ಕಚೇರಿಗೆ ಪತ್ರ ಬರೆಯಬೇಕು ಎಂದರು.

ರೈತರು ಅಥವಾ ಸಾರ್ವಜನಿಕರಿಗೆ ಸರ್ಕಾರದಿಂದ ನೀಡುವ ಪ್ರೋತ್ಸಾಹ ಧನ ಸಾಲದ ಇ.ಎಂ‌.ಐ.ಗೆ ಕಡಿತ ಮಾಡಿಕೊಂಡ ನಂತರ ಸಂಬಂಧಿಸಿದವರು ಬ್ಯಾಂಕ್ ಗೆ ತೆರಳಿ ತಿಳಿಸಿದರೆ ಸಹಾಯಧನ ಖಾತೆಗೆ ಹಿಂದಿರುಗಿಸುವ ಬದಲು ಸಾಫ್ಟ್‌ವೇರ್ ಅಳವಡಿಸಿಕೊಳ್ಳಿ. ಬ್ಯಾಂಕಿಗೆ ತೆರಳಿ ಪ್ರಶ್ನಿಸುವ ಸಾಮರ್ಥ್ಯ ಎಲ್ಲಾ ಜನರು ಹೊಂದಿರುವುದಿಲ್ಲ. ಬ್ಯಾಂಕ್ ನಡೆಯುವುದು ಗ್ರಾಹಕರಿಂದ. ಗ್ರಾಮೀಣ ಪ್ರದೇಶದಲ್ಲಿ ಬಡ ರೈತರು ಬ್ಯಾಂಕಿನ ಗ್ರಾಹಕರಾಗಿದ್ದು, ಅವರೊಂದಿಗೆ ಗೌರವದಿಂದ ವರ್ತಿಸಿ. ಬ್ಯಾಂಕ್ ವ್ಯವಹಾರ ಹಾಗೂ ವಿವಿಧ ಮಾನದಂಡಗಳ ಬಗ್ಗೆ ಅವರಿಗೆ ಅರ್ಥವಾಗುವ ರೀತಿ ಕನ್ನಡದಲ್ಲಿ ತಿಳಿಸಿ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ, ಸರ್ಕಾರದಿಂದ ನೀಡಲಾಗುವ ವಿವಿಧ ರೀತಿಯ ಸಾಮಾಜಿಕ ಪಿಂಚಣಿ, ಹಾಲಿನ ಪ್ರೋತ್ಸಾಹ ಧನ, ಅನ್ನ ಭಾಗ್ಯ, ಗೃಹ ಲಕ್ಷ್ಮಿ, ಹಣ, ಮನರೇಗಾ ಕೂಲಿ, ಬೆಳೆ ನಷ್ಠದ ಹಣವನ್ನು ಮಾನವೀಯ ದೃಷ್ಠಿಯಿಂದ ಸಾಲದ ಮರುಪಾವತಿಗೆ ಕಡಿತ ಮಾಡಬೇಡಿ ಎಂದರು.

ಕನ್ನಡದಲ್ಲಿ ವ್ಯವಹರಿಸಿ: ಮಂಡ್ಯ ಜಿಲ್ಲೆ ರೈತರ ಜಿಲ್ಲೆಯಗಿದ್ದು, ಅವರೊಂದಿಗೆ ಕನ್ನಡದಲ್ಲಿ ವ್ಯವಹರಿಸಿ. ಬಹಳಷ್ಟು ಬ್ಯಾಂಕ್ ಸಿಬ್ಬಂದಿ ಹಾಗೂ ವ್ಯವಸ್ಥಾಪಕರಿಗೆ ಕನ್ನಡ ತಿಳಿದಿದ್ದರು, ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತನಾಡುತ್ತಾರೆ. ಈ ಧೋರಣೆ ಬದಲಾಗಬೇಕು ಎಂದರು.

ರೈತರು ಪಡೆಯುವ ಬೆಳೆ ಸಾಲವನ್ನು ನಿಗದಿತ ಅವಧಿಯಲ್ಲಿ ಪಾವತಿ ಮಾಡಿದರೆ ಬಡ್ಡಿಯ ಹಣದ ಶೇ 3 ರಷ್ಟು ರಿಬೇಟ್ ಹಿಂದಿರುಗಿಸುವ ಯೋಜನೆಯಿದ್ದು ಇದರ ಬಗ್ಗೆ ರೈತರಿಗೆ ಮಾಹಿತಿ ನೀಡಿ ಎಂದರು.

ಬ್ಯಾಂಕ್ ಗೆ ಸಂಬಂಧಿಸಿದಂತೆ ಗ್ರಾಹಕರ ಸೇವಾ‌ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಸೇವಾ ಕೇಂದ್ರಗಳಲ್ಲಿ ಸಿ.ಸಿ.ಟಿವಿ ಅಳವಡಿಸುವುದು ಉತ್ತಮ. ಇದರಿಂದ ಗ್ರಾಹಕರಿಂದ ದೂರು ಬಂದಲ್ಲಿ ಪರಿಶೀಲಿಸಲು ಸುಲಭ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್, ರೈತ ಸಂಘಟನೆಗಳ ಮುಖಂಡರು ಸೇರಿದಂತೆ ವಿವಿಧ ಬ್ಯಾಂಕ್ ವ್ಯವಸ್ಥಾಪಕರು ಉಪಸ್ಥಿತರಿದ್ದರು‌.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

5 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

6 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

10 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

12 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

13 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

14 hours ago